ಕೋವಿಡ್ ಹಗರಣ; ಬಿಬಿಎಂಪಿ ಅಧಿಕಾರಿಗಳಿಗೆ ಬಿಗ್ ಶಾಕ್ – ಇಂದಿನಿಂದ ನೋಟಿಸ್‍ಗೆ ಉತ್ತರಿಸದವರ ವಿಚಾರಣೆ

Public TV
1 Min Read

ಬೆಂಗಳೂರು: ಬಿಜೆಪಿ (BJP) ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣಕ್ಕೆ (Covid Scam) ಸಂಬಂಧಿಸಿದಂತೆ ಸೋಮವಾರದಿಂದ (ಏ.14) ಬಿಬಿಎಂಪಿಯಲ್ಲಿ ವಿಚಾರಣೆ ನಡೆಯಲಿದೆ.

ನೋಟಿಸ್ ಉತ್ತರ ಕೊಡದ 29 ಅಧಿಕಾರಿಗಳ ಪೈಕಿ 17 ಅಧಿಕಾರಿಗಳ ಇಲಾಖಾ ವಿಚಾರಣೆ ನಡೆಸಲು ಮುಖ್ಯ ಆಯುಕ್ತರು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಇಲಾಖೆ ವಿಚಾರಣೆ ಬಳಿಕ ನೋಟಿಸ್‍ಗೆ ಉತ್ತರಿಸದ ಅಧಿಕಾರಿಗಳ ವಿರುದ್ಧ ಕ್ರಮ ಆಗಲಿದೆ. ಇದನ್ನೂ ಓದಿ: ಜೀಪ್ ರೇಸ್‍ಗೆ ಬಂದಿದ್ದ ಕೇರಳದ ವ್ಯಕ್ತಿಯನ್ನು ಅಟ್ಟಾಡಿಸಿದ ದೈತ್ಯ ಸಲಗ – ಎದೆ ಝಲ್ ಎಸಿಸುವ ದೃಶ್ಯ!

ಬಿಜೆಪಿ ಕಾಲದ ಕೋವಿಡ್ ಹಗರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿಯ 200ಕ್ಕೂ ಹೆಚ್ಚು ಅಧಿಕಾರಿಗಳಿಗೆ ಖರ್ಚು ವೆಚ್ಚದ ಬಗ್ಗೆ ಮಾಹಿತಿ ನೀಡುವಂತೆ ನೋಟಿಸ್ ನೀಡಲಾಗಿತ್ತು. ನೋಟಿಸ್‍ಗೆ ಬಹುತೇಕ ಆರೋಗ್ಯಾಧಿಕಾರಿಗಳು ಉತ್ತರ ನೀಡಿದ್ದಾರೆ. ಆದರೆ 29 ಅಧಿಕಾರಿಗಳು ನೋಟಿಸ್‍ಗೆ ಉತ್ತರವೇ ನೀಡಿಲ್ಲ. ಉತ್ತರ ನೀಡದ ಅಧಿಕಾರಿಗಳ ವಿರುದ್ಧ ಇಲಾಖೆ ಹಂತದಲ್ಲಿ ವಿಚಾರಣೆ ಮಾಡಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ವಿಶೇಷ ಆಯುಕ್ತ ವಿಕಾಸ್ ಸೂರಳ್ಕರ್ ಅವರಿಗೆ ಸೂಚಿಸಿದ್ದಾರೆ.

ಇಂದಿನಿಂದ ಇಲಾಖಾ ಹಂತದ ವಿಚಾರಣೆ ನಡೆಯಲಿದೆ. ನೋಟಿಸ್‍ಗೆ ಯಾಕೆ ಉತ್ತರ ನೀಡಿಲ್ಲ. ಏನು ಕಾರಣ? ನಿಮ್ಮ ಅವಧಿಯಲ್ಲಿ ಎಷ್ಟು ಖರ್ಚು ಆಗಿತ್ತು ರಂದು ಪ್ರಶ್ನಿಸಲಿದ್ದಾರೆ. ಸರಿಯಾದ ಉತ್ತರ ಬರದೇ ಇದ್ದರೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಅಥವಾ ಅಮಾನತು ಮಾಡುವ ನಿರ್ಧಾರ ಕೈಗೊಳ್ಳಲಿದ್ದಾರೆ.

ದಾಸರಹಳ್ಳಿಯ 16 ಅಧಿಕಾರಿಗಳು, ಪೂರ್ವವಲಯ, ಆರ್ ಆರ್ ನಗರ ಮತ್ತೆ ಕೇಂದ್ರ ಕಛೇರಿಯ ತಲಾ ಇಬ್ಬರು ಅಧಿಕಾರಿಗಳು ವಿಚಾರಣೆ ಎದುರಿಸಲಿದ್ದಾರೆ. ಇದನ್ನೂ ಓದಿ: ನಟ ಬ್ಯಾಂಕ್ ಜನಾರ್ಧನ್ ವಿಧಿವಶ – ನಿವಾಸದಲ್ಲೇ ಸಂಜೆ 4 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ

Share This Article