– 11 ಗೋವುಗಳನ್ನು ರಕ್ಷಿಸಿದ ಗ್ರಾಮಸ್ಥರು
ಕಾರವಾರ: ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಗ್ರಾಮಸ್ಥರು ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ತಾಲೂಕಿನ ಬಿಳಗಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಸಿದ್ದಾಪುರದ ಮಂಜುನಾಥ ಗೌಡ, ಮಂಜು ನೀರಾ ಗೌಡ, ಹಾನಗಲ್ಲಿನ ಚನ್ನಬಸಪ್ಪ ಚಂದ್ರಶೇಖರ ಗುಜ್ಜಣ್ಣನವರ್, ಮಹಮ್ಮದ್ ಗೌಸ್ ಸಲೀಮ್ ಪಾಶಾ ಬಂಧಿತ ಆರೋಪಿಗಳು.
ಕಸಾಯಿಖಾನೆಗೆ ಸಾಗಿಸುತ್ತಿದ್ದ 11 ಜಾನುವಾರಗಳನ್ನು ಸ್ಥಳೀಯರು ರಕ್ಷಿಸಿದ್ದಾರೆ. ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿರುವುದ ಬಗ್ಗೆ ಸ್ಥಳೀಯರಿಗೆ ತಿಳಿದು ವಾಹನ ಅಡ್ಡಗಟ್ಟಿ ವಿಚಾರಿಸಿದಾಗ ಸುಳ್ಳು ಮಾಹಿತಿ ನೀಡಿದ್ದರು. ಇದರಿಂದ ಆಕ್ರೋಶಗೊಂಡ ಸ್ಥಳೀಯರು, ಆರೊಪಿಗಳನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಹೊನ್ನಾವರದಿಂದ ಹಾನಗಲ್ಲಿನ ಕಸಾಯಿಖಾನೆಗೆ ಅಕ್ರಮವಾಗಿ ಗೋವುಗಳನ್ನು ಸಾಗಿಸಲಾಗುತಿತ್ತು ಎಂದು ಆರೋಪಿಸಲಾಗಿದೆ. ಈ ಕುರಿತು ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.