ಕೊಟ್ಟಿಗೆಯಲ್ಲಿದ್ದ ಹಸುಗಳ ಕಿಡ್ನಿ ತೆಗೆದು ಹತ್ಯೆ- ಹಾವೇರಿಯಲ್ಲಿ ಅಮಾನವೀಯ ಕೃತ್ಯ

Public TV
1 Min Read

ಹಾವೇರಿ: ದನದ ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸುಗಳ ಕಿಡ್ನಿಗಳನ್ನು ತೆಗೆದು ಹತ್ಯೆ ಮಾಡಿದ ಅಮಾನವೀಯ ಘಟನೆ ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದ ದಂಡಿನ ಪೇಟೆಯಲ್ಲಿ ನಡೆದಿದೆ.

ರೈತ ಕಲ್ಲಪ್ಪ ಪೂಜಾರಿ ಎಂಬವರಿಗೆ ಸೇರಿದ ಎರಡು ಹಸುಗಳನ್ನು ಮನೆಯ ಹಿಂಭಾಗದಲ್ಲಿರೋ ದನದ ಕೊಟ್ಟಿಗೆಯಲ್ಲಿ ಕಟ್ಟಲಾಗಿತ್ತು. ಆದ್ರೆ ದುರ್ಷ್ಕಮಿಗಳು ಎರಡು ಹಸುಗಳ ಕಿಡ್ನಿ ಕಿತ್ತು ಹಾಕಿ ಹತ್ಯೆ ಮಾಡಿದ್ದಾರೆ. ಅತಿ ಹೆಚ್ಚು ಹಾಲು ನೀಡುತ್ತಿದ್ದ ಕಾರಣಕ್ಕೆ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ.

ನುರಿತ ವ್ಯಕ್ತಿಗಳು ಹಸುಗಳನ್ನು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪಶುವೈದ್ಯರು ಪರಿಶೀಲನೆ ನಡೆಸಿ, ಹಸುಗಳ ಕಿಡ್ನಿ ಯಾವುದೇ ಕೆಲಸಕ್ಕೆ ಮರು ಬಳಕೆ ಆಗುವುದಿಲ್ಲ. ಆದ್ರೆ ಕಿಡ್ನಿ ತೆಗೆದು ಹತ್ಯೆ ಮಾಡಿರುವುದು ಆಶ್ಚರ್ಯ ಉಂಟು ಮಾಡಿದೆ.

ಈ ಕುರಿತಂತೆ ಸವಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಹತ್ಯೆ ಮಾಡಿದ ಆರೋಪಿಗಳನ್ನು ಶೀಘ್ರವೇ ಬಂಧಿಸುವಂತೆ ಇಲ್ಲಿನ ಜನರು ಆಗ್ರಹಿಸಿದ್ದಾರೆ.

 

Share This Article
Leave a Comment

Leave a Reply

Your email address will not be published. Required fields are marked *