ಹೂವಿನ ಹಾರದಲ್ಲಿ ಮಾಂಸ ಬಚ್ಚಿಟ್ಟು ದೇವರಿಗೆ ಸಮರ್ಪಣೆ ಮಾಡಿದ ಕಿಡಿಗೇಡಿಗಳು

Public TV
1 Min Read

ಚಿಕ್ಕಬಳ್ಳಾಪುರ: ದೇವಾಲಯಕ್ಕೆ ಬಂದ ಅಪರಿಚಿತ ಕಿಡಿಗೇಡಿಗಳು ಹೂವಿನ ಹಾರದಲ್ಲಿ (Flower garland) ಮಾಂಸದ ತುಂಡುಗಳನ್ನು (Meat) ಬಚ್ಚಿಟ್ಟು, ದೇವರಿಗೆ ಸಮರ್ಪಿಸಲು ನೀಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಚಿಕ್ಕಮಧುರೆಯ ಇತಿಹಾಸ ಪ್ರಸಿದ್ಧ ಶ್ರೀ ಶನಿಮಹಾತ್ಮ ದೇವಸ್ಥಾನದಲ್ಲಿ ನಡೆದಿದೆ. ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದೆ.

ಘಟನೆ ಕುರಿತು ಮಾಹಿತಿ ನೀಡಿರುವ ದೇವಾಲಯದ ಧರ್ಮದರ್ಶಿ ಪ್ರಕಾಶ್, ಕೆಲ ದಿನಗಳ ಹಿಂದೆ ಈ ಘಟನೆ ನಡೆದಿದೆ. ಅಪರಿಚಿತ ಇಬ್ಬರು ಯುವಕರು ದೇವರ ದರ್ಶನಕ್ಕೆಂದು ಬಂದಿದ್ದು, ಪ್ಲಾಸ್ಟಿಕ್ ಕವರ್ ಅನ್ನು ದೇವಾಲಯದೊಳಕ್ಕೆ (Temple) ಕೊಂಡೊಯ್ಯಲು ಯತ್ನಿಸಿದ್ದಾರೆ. ದೇವಾಲಯದಲ್ಲಿ ಪೇಪರ್ ಹಾಗೂ ಪ್ಲಾಸ್ಟಿಕ್ ಒಳಗೊಂಡ ಹಾರಗಳನ್ನು ನಿಷೇಧಿಸಿರುವುದರಿಂದ ಅವನ್ನು ತೆಗೆದುಕೊಂಡು ಹೋಗದಂತೆ ಯುವಕರನ್ನು ತಡೆಯಲಾಗಿದೆ. ಇದನ್ನೂ ಓದಿ: ರೋಹಿಣಿ ಸಿಂಧೂರಿ ವಿರುದ್ಧ ಅಕ್ರಮ ಆಸ್ತಿ ಆರೋಪ- IAS ಅಧಿಕಾರಿ ಆಸ್ತಿಯ Exclusive ಡೀಟೆಲ್ಸ್ ಇಲ್ಲಿದೆ

ಬಳಿಕ ಕಿಡಿಗೇಡಿಗಳು ದೇವರಿಗೆ ಹೂವಿನ ಹಾರ ಹಾಕಿ ಎಂದು ಪ್ಲಾಸ್ಟಿಕ್ ಕವರ್‌ನಲ್ಲಿದ್ದ ಹಾರಗಳನ್ನು ದೇವಸ್ಥಾನದ ಸಿಬ್ಬಂದಿಗೆ ನೀಡಿದ್ದಾರೆ. ಬಳಿಕ ಅಲ್ಲಿಂದ ಕಾಲ್ಕಿತ್ತಿದ್ದಾರೆ. ಕವರ್ ಪಡೆದ ಸಿಬ್ಬಂದಿ ದೇವರಿಗೆ ಹಾರ ಹಾಕಲೆಂದು ಗರ್ಭಗುಡಿಯೊಳಗೆ ತೆರಳುವಾಗ ಮಾಂಸದ ತುಂಡು ಹಾರದಿಂದ ಜಾರಿ ಕೆಳಗೆ ಬಿದ್ದಿದೆ. ತಕ್ಷಣ ಸಿಬ್ಬಂದಿ ಹೂವಿನ ಹಾರದ ಸಮೇತ ಕವರ್ ಅನ್ನು ಹೊರಗೆ ಎಸೆದಿದ್ದಾರೆ.

ಕಿಡಿಗೇಡಿಗಳು ದೇವರಿಗೆ ಅಪಚಾರ ಮಾಡಲು ಈ ರೀತಿ ಕೃತ್ಯ ನಡೆಸಿದ್ದು, ಇದರ ಹಿಂದಿನ ಉದ್ದೇಶ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಯುವಕರು ದೇವಾಲಯಕ್ಕೆ ಬಂದು ಹೋಗುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆಗೆ ಸಂಬಂಧಿಸಿದಂತೆ ದೇವಾಲಯದ ಸಿಬ್ಬಂದಿ ದೊಡ್ಡಬೆಳವಂಗಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಸಿಸಿಟಿವಿ ದೃಶ್ಯ ಆಧರಿಸಿಕೊಂಡು ಯುವಕರನ್ನು ಪತ್ತೆ ಹಚ್ಚಲು ಮುಂದಾಗಿದ್ದಾರೆ. ಇದನ್ನೂ ಓದಿ: ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಪತಿಯಿಂದ ಹೆಂಡ್ತಿ, ಮಕ್ಕಳ ಕೊಲೆ?

LIVE TV
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
1 Comment

Leave a Reply

Your email address will not be published. Required fields are marked *