ಕೃಷ್ಣಾ ನದಿ ತೀರದ ಗ್ರಾಮದಲ್ಲಿ ಮನೆಗೆ ನುಗ್ಗಿದ ಮೊಸಳೆ

Public TV
1 Min Read

ಬೆಳಗಾವಿ: ಕೃಷ್ಣಾ ನದಿ ತೀರದ ಗ್ರಾಮದಲ್ಲಿ ಮನೆಗೆ ಮೊಸಳೆಯೊಂದು ನುಗ್ಗಿದ ಘಟನೆ ಅಥಣಿ ತಾಲೂಕಿನ ಸವದಿ ದರ್ಗಾ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಮುರೆಗಪ್ಪ ಮಾಯಪ್ಪನ್ನವರ ಎಂಬವರ ಮನೆಯ ಕೊಟ್ಟಿಗೆಯಲ್ಲಿ ಕಟ್ಟಿದ ಎಮ್ಮೆ, ಮೇಕೆ ಹಾಗೂ ಹಸುಗಳನ್ನು ತಿನ್ನಲು ಬಂದಿದ್ದ ಮೊಸಳೆಯನ್ನು ಗ್ರಾಮಸ್ಥರು ಸೆರೆ ಹಿಡಿದು ಕಟ್ಟಿ ಹಾಕಿದ್ದಾರೆ.

ರಾತ್ರಿ ಸಂದರ್ಭದಲ್ಲಿ ಆಹಾರ ಹುಡುಕುತ್ತಾ ಬಂದಿದ್ದ ಮೊಸಳೆಯನ್ನ ಕಂಡು ಗ್ರಾಮಸ್ಥರು ಹಗ್ಗದಿಂದ ಮರಕ್ಕೆ ಕಟ್ಟಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಸಹ ಸ್ಥಳಕ್ಕೆ ಅಧಿಕಾರಿಗಳು ಬಾರದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೊಸಳೆ ಸಿಕ್ಕಿದ ಕಾರಣ ನದಿ ಪಾತ್ರದ ಗ್ರಾಮಗಳಲ್ಲಿ ಆತಂಕ ಎದುರಾಗಿದ್ದು ಅರಣ್ಯ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕಿದೆ.

Share This Article
Leave a Comment

Leave a Reply

Your email address will not be published. Required fields are marked *