ಕೊತ್ವಾಲ್ ರಾಮಚಂದ್ರನ ಚೇಲಾ ನಾನಲ್ಲ: ಸಿ.ಟಿ ರವಿ

Public TV
1 Min Read

ಚಿಕ್ಕಮಗಳೂರು: ನಾನು ದೇಶಭಕ್ತಿ ಸಂಘಟನೆ ಆರ್‌ಎಸ್‌ಎಸ್‌ನ ಸ್ವಯಂ ಸೇವಕ. ಕೊತ್ವಾಲ್ ರಾಮಚಂದ್ರನ ಚೇಲಾ ಅಲ್ಲ. ಕೊತ್ವಾಲ್ ರಾಮಚಂದ್ರನ ಚೇಲಾಗಳು ಆದವರಿಗೆ ಉಳಿದವರು ಹಾಗೇ ಕಾಣುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಲೂಟಿ ರವಿ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಮತ್ತೆ ಟಾಂಗ್ ನೀಡಿದ್ದಾರೆ.

ಚಿಕ್ಕಮಗಳೂರಿನಲ್ಲಿ ದತ್ತಪೀಠದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಶಾಸಕನಾದ ಮೇಲೆ ನನ್ನ ಆಸ್ತಿಯಲ್ಲಿ ಹೆಚ್ಚಳ ಆಗಿಲ್ಲ. ಅಕ್ರಮ ಸಂಪತ್ತು ಮಾಡ್ಕೊಂಡು ಜೈಲು-ಬೇಲು ಕಂಡವರು ಇನ್ನೊಬ್ಬರ ಬಗ್ಗೆ ಆರೋಪ ಮಾಡುತ್ತಾರೆ. ನಾನು ದತ್ತಪೀಠ-ಜನಪರ ಹೋರಾಟ ಮಾಡಿ ಜೈಲಿಗೆ ಹೋಗಿದ್ದೇನೆ. ಹಣ ಲೂಟಿ ಮಾಡಿ, ಇನ್ನೊಬ್ಬರ ಆಸ್ತಿ ಲೂಟಿ ಮಾಡಿ ಜೈಲಿಗೆ ಹೋಗಿಲ್ಲ. ಅಕ್ರಮ ಸಂಪತ್ತು ಗಳಿಸಿ ಜೈಲಿಗೆ ಹೋಗಿರುವ, ಬೇಲ್‍ನಲ್ಲಿರುವ ಯಾವುದೇ ಕುಖ್ಯಾತಿ ನನಗಿಲ್ಲ ಎಂದು ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಸಿಟಿ ರವಿ ಅಲ್ಲ ಲೂಟಿ ರವಿ, ಡಿಕೆ ಅಲ್ಲ ಕೆಡಿ – ಪರಸ್ಪರ ವಾಗ್ದಾಳಿ ನಡೆಸಿದ ನಾಯಕರು

ಕೋಟಿ ರವಿ ಎಂದು ನನ್ನ ಬಗ್ಗೆ ಟೀಕೆ ಮಾಡಿದರೆ ನಾನು ಕೋಟಿ ಜನರ ಹೃದಯದಲ್ಲಿ ಸ್ಥಾನ ಪಡೆದ ರವಿ ಎಂದು ಅಂದುಕೊಳ್ಳುತ್ತೇನೆ. 2004ರ ನಂತರ ಶಾಸಕನಾದ ಮೇಲೆ ಅಂದಿನಿಂದ ಇಂದಿನವರೆಗೆ ನನ್ನ ಆಸ್ತಿ ಹೆಚ್ಚಳವಾಗಿಲ್ಲ. ನಾನು ಜನಪರ ಕೆಲಸಗಳನ್ನು ಮಾಡುತ್ತ ಬರುತ್ತಿದ್ದೇನೆ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಪ್ರೀತಿ ಮಾಡುತ್ತಿದ್ದ ಜೋಡಿಗೆ ಮದುವೆ ಮಾಡಿಸಿದಕ್ಕೆ ಸ್ನೇಹಿತನನ್ನೇ ಕೊಂದ್ರು

Share This Article
Leave a Comment

Leave a Reply

Your email address will not be published. Required fields are marked *