ನನಗೆ ನಾನ್ ವೆಜ್ ತಿಂದಿದ್ದು ನೆನಪಿರಲಿಲ್ಲ: ಸಿ.ಟಿ ರವಿ

Public TV
2 Min Read

ಬೆಂಗಳೂರು: ನಾನು ನಾನ್ ವೆಜ್ ತಿಂದಿದ್ದೆ ಅನ್ನೋದನ್ನ ಮರೆತಿದ್ದೆ. ಅದು ನನ್ನ ಭೇಟಿಯ ಉದ್ದೇಶವಾಗಿರಲಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ (CT Ravi) ತಿಳಿಸಿದರು.

ಸಿಟಿ ರವಿ ಅವರು ಮಾಂಸ ತಿಂದು ದೇವಸ್ಥಾನಕ್ಕೆ (Temple) ಭೇಟಿ ನೀಡಿದ್ದ ಫೋಟೋ ವೈರಲ್‌ ಆದ ಬೆನ್ನಲ್ಲೇ ಪರ ವಿರೋಧ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿದ ಅವರು, ನಾನು ನಾನ್ ವೆಜ್ (Non Veg) ತಿಂದಿದ್ದೆ ಅನ್ನೋದನ್ನ ಮರೆತಿದ್ದೆ. ಅಲ್ಲಿನ ಸ್ಥಳೀಯರ ಅಪೇಕ್ಷೆ‌ ಮೇರೆಗೆ ಹೋಗಿದ್ದೆ. ಹೀಗಾಗಿ ನಾನು ದೇವಸ್ಥಾನ ಪ್ಯಾಸೇಜ್ ಬಳಿ ಮಾತ್ರ ಹೋಗಿದ್ದೆ. ಎಲ್ಲವನ್ನೂ ಎದೆ ಬಗೆದು ತೋರಿಸಲು ನಾನು ಹನುಮಂತ ಅಲ್ಲ. ಕಾಂಗ್ರೆಸ್‌ನವರಂತೆ ನಾನು ತಿಂದು ಹೋಗಿದ್ದೆ ಏನ್ ಈಗ ಅಂತ ನಾನು ಹೇಳಲ್ಲ ಎಂದು ಸ್ಪಷ್ಟ ಪಡಿಸಿದರು.

ನಾನು ನಾನ್ ವೆಜ್ ತಿಂದಿದ್ದು ಹೌದು, ಆದರೆ ದೇವಸ್ಥಾನದ ಒಳಗೆ ಹೋಗಲಿಲ್ಲ. ದೇವಸ್ಥಾನದ ಪ್ಯಾಸೇಜ್ ಬಳಿ ಮಾತ್ರ ಹೋಗಿದ್ದು, ಗರ್ಭಗುಡಿಯ ಹೊರಭಾಗದಲ್ಲಿ ಇದ್ದೆ. ದೇವಸ್ಥಾನದ ಆವರಣದಲ್ಲಿ ಕಟ್ಟಡ ಕಟ್ಟಲು ಮುಸ್ಲಿಮರು ಅವಕಾಶ ಕೊಟ್ಟಿರಲಿಲ್ಲ. ಈ ದೇವಸ್ಥಾನಕ್ಕೆ ಭೇಟಿ ನೀಡಬೇಕೆಂದು ಮೊದಲೇ ನಿರ್ಧಾರ ಮಾಡಿರಲಿಲ್ಲ. ಅಲ್ಲಿನ ಸ್ಥಳೀಯರೇ ಕರೆದುಕೊಂಡು ಹೋಗಿದ್ದರು. ಕೆಲವು ವೆಜ್ ಮತ್ತು ನಾನ್ ವೆಜ್ ದೇವಸ್ಥಾನಗಳಿವೆ, ನಾನ್‌ ವೆಜ್‌ ದೇವಸ್ಥಾನಗಳಲ್ಲಿ ಮಾಂಸಹಾರಿ ನೈವೇದ್ಯ ಮಾಡಲಾಗುತ್ತದೆ. ಅಂಥ ದೇವಸ್ಥಾನಗಳಿಗೆ ಹೋಗಬಹುದು ಎಂದು ಹೇಳಿದರು. ಇದನ್ನೂ ಓದಿ:  ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ದ್ವಿಚಕ್ರ ವಾಹನ ಸಿಕ್ಕಿಬಿದ್ರೆ 5 ಸಾವಿರ ದಂಡ

ಘಟನೆಯೇನು?: ಫೆ.19ರ ಭಾನುವಾರದಂದು ಉತ್ತರ ಕನ್ನಡ ಜಿಲ್ಲೆಗೆ ಆಗಮಿಸಿದ್ದ ಸಿ.ಟಿ ರವಿ ಕಾರವಾರದ ಶಿವಾಜಿ ಜಯಂತಿಯಲ್ಲಿ ಭಾಗವಹಿಸಿ ನಂತರ ಭಟ್ಕಳಕ್ಕೆ ಆಗಮಿಸಿದ್ದರು. ಈ ವೇಳೆ ಭಟ್ಕಳದ ಶಿರಾಲಿಯಲ್ಲಿರುವ ಶಾಸಕ ಸುನಿಲ್ ನಾಯ್ಕ ಮನೆಯಲ್ಲಿ ಮೀನೂಟ ಸೇವಿಸಿದ್ದ ಸಿ.ಟಿ ರವಿ ಭಟ್ಕಳ ನಗರದ ಹಳೇ ಬಸ್ ನಿಲ್ದಾಣ ಸಮೀಪ ಇರುವ ನಾಗಬನ ಹಾಗೂ ಕರಿಬಂಟ ಹನುಮ ದೇವಸ್ಥಾನಕ್ಕೆ ಭಟ್ಕಳ ಶಾಸಕ ಸುನಿಲ್ ನಾಯ್ಕ (Sunil Naik) ಹಾಗೂ ದೇವಸ್ಥಾನದ ಕಮಿಟಿ ಸದಸ್ಯರೊಂದಿಗೆ ಭೇಟಿ ನೀಡಿದ್ದಾರೆ ಎಂದು ಹೇಳಲಾಗುತ್ತಿತ್ತು. ಈ ಘಟನೆ ವಿವಾದಕ್ಕೆ ಕಾರಣವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳು ಹರಿದಾಡುತ್ತಿದೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಮೋದಿ ರೋಡ್ ಶೋಗೆ ಸಿದ್ಧತೆ ಮಾಡಿಕೊಂಡಿದ್ದೇವೆ: ಶೋಭಾ ಕರಂದಾಜ್ಲೆ

LIVE TV
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *