ಭೀಕರ ಸರಣಿ ಅಪಘಾತ – ಒಂದೇ ಕುಟುಂಬದ ಐವರು ಸಾವು

Public TV
1 Min Read

ಚೆನ್ನೈ: ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸಾವನ್ನಪ್ಪಿದ ಘಟನೆ ತಮಿಳುನಾಡಿನ (Tamil Nadu) ಕಡಲೂರು ಜಿಲ್ಲೆಯ ತಿರುಚ್ಚಿ- ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮಂಗಳವಾರ ಮುಂಜಾನೆ ಈ ಘಟನೆ ನಡೆದಿದ್ದು, ಒಂದೇ ಬಾರಿಗೆ 6 ವಾಹನಗಳು ಅಪಘಾತಕ್ಕೀಡಾಗಿದೆ. (Pileup) 2 ಖಾಸಗಿ ಬಸ್‍ಗಳು, (Private Bus) 2 ಲಾರಿಗಳು (Lorries) ಹಾಗೂ 2 ಕಾರುಗಳ (Cars) ರಾಶಿ ಬಿದ್ದಿವೆ. ಇನ್ನೂ ಮೃತರ ಗುರುತನ್ನು ಪತ್ತೆ ಹಚ್ಚಿಲ್ಲ. ಅಪಘಾತ ನಡೆದಾಗ  ಮೃತರೆಲ್ಲರೂ ಕಾರಿನಲ್ಲಿದ್ದರು.

crime

ಘಟನೆಗೆ ಸಂಬಂಧಿಸಿ ವೇಪ್ಪೂರು ಅಗ್ನಿಶಾಮಕ ದಳದ ಸಿಬ್ಬಂದಿಯ ನೆರವಿನಿಂದ ಮೃತದೇಹಗಳನ್ನು ಕಾರಿನಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಯಿತು. ಇದನ್ನೂ ಓದಿ: 9 ದಿನದ ಬ್ರೇಕ್ ಬಳಿಕ ಜೋಡೋ ಯಾತ್ರೆ ಪುನರಾರಂಭ

ಈ ಬಗ್ಗೆ ಪೊಲೀಸ್‌ ಅಧಿಕಾರಿ ಮಾತನಾಡಿ ಮೃತರನ್ನು ಗುರುತಿಸಲು ಸಾಧ್ಯವಾಗಲಿಲ್ಲ. ಆದರೆ ಕಾರು ನೋಂದಣಿ ಪುಸ್ತಕದ ಪ್ರಕಾರ, ವಾಹನವು ಚೆನ್ನೈನ ನಂಗನಲ್ಲೂರ್‌ಗೆ ಸೇರಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಉತ್ತರ ಕರ್ನಾಟಕದ ನಡೆದಾಡುವ ದೇವರು ಸಿದ್ದೇಶ್ವರ ಶ್ರೀ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *