ವಿನೋದ್ ಕಾಂಬ್ಳಿಗೆ ಸೈಬರ್ ಕಳ್ಳರಿಂದ ವಂಚನೆ

Public TV
1 Min Read

ಮುಂಬೈ: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಅವರಿಗೆ ಸೈಬರ್ ವಂಚಕರು 1 ಲಕ್ಷ ರೂ. ವಂಚಿಸಿರುವ ಘಟನೆ ಬಾಂದ್ರಾದಲ್ಲಿ ನಡೆದಿದೆ.

ಪ್ರಸಿದ್ಧ ಬ್ಯಾಂಕ್‌ನ ಪ್ರತಿನಿಧಿಯೆಂದು ಕಾಂಬ್ಳಿಗೆ ಕರೆ ಮಾಡಿದ್ದಾರೆ. ನಂತರ ಕೆವೈಸಿ ಅಪ್ಡೇಟ್ ಮಾಡಲು ತಿಳಿಸಿದ್ದಾರೆ. ಬಳಿಕ ಅವರ ಬ್ಯಾಂಕ್ ವಿವರಗಳನ್ನೆಲ್ಲಾ ತೆಗೆದುಕೊಂಡು ಅಪ್‌ಲೊಡ್ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

MONEY

ಸ್ವಲ್ಪ ಸಮಯದ ನಂತರ ಅವರ ಖಾತೆಯಿಂದ ಒಂದು ಲಕ್ಷ ರೂ.ವನ್ನು ವಂಚಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆ ಸಂಬಂಧಿಸಿದಂತೆ ಕಾಂಬ್ಳಿ ಅಪರಿಚಿತ ವ್ಯಕ್ತಿಯ ಮೇಲೆ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಶುರುವಾಗಿದೆ ಹೈಟೆಕ್ ಡ್ರಗ್ಸ್ ಪೆಡ್ಲಿಂಗ್

ಮಾಜಿ ಕ್ರಿಕೆಟ್ ಆಟಗಾರರಾಗಿರುವ ವಿನೋದ್ ಕಾಂಬ್ಳಿ ಸಚಿನ್ ತೆಂಡೂಲ್ಕರ್ ಜೊತೆಗೆ 664 ರನ್‌ಗಳ ಜೊತೆಯಾಟವಾಡಿ ಪ್ರಸಿದ್ಧಿಯನ್ನು ಪಡೆದಿದ್ದರು. 17 ಟೆಸ್ಟ್ ಪಂದ್ಯಗಳಲ್ಲಿ ನಾಲ್ಕು ಶತಕ, 3 ಅರ್ಧ ಶತಕಗಳೊಂದಿಗೆ 1048 ರನ್ ಹಾಗೂ ಏಕದಿನ ಪಂದ್ಯಗಳಲ್ಲಿ 2 ಶತಕ, 14 ಅರ್ಧಶತಕದೊಂದಿಗೆ 2477 ರನ್ ಗಳ ಸಾಧನೆಯನ್ನು ಮಾಡಿದ್ದಾರೆ. ಇದನ್ನೂ ಓದಿ: ಪತ್ನಿಯನ್ನು ಮನೆಗೆ ಕಳುಹಿಸದ ಅತ್ತೆಗೆ ಬ್ಲೇಡ್‌ನಿಂದ ಹಲ್ಲೆ ಮಾಡಿದ ಅಳಿಯ

Share This Article
Leave a Comment

Leave a Reply

Your email address will not be published. Required fields are marked *