ಫೆಂಗಲ್ ಚಂಡಮಾರುತ ಎಫೆಕ್ಟ್ – ಅದ್ಯಪಾಡಿಯಲ್ಲಿ ಭೂಕುಸಿತ

Public TV
0 Min Read

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ ಜೋರಾಗಿದೆ. ಕಳೆದ 2 ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಗೆ ಅದ್ಯಪಾಡಿಯಲ್ಲಿ ಭೂಕುಸಿತವಾಗಿದೆ.

ಬಜಪೆ ಸಮೀಪದ ಅದ್ಯಪಾಡಿಯಲ್ಲಿ ಭೂಕುಸಿತ ಸಂಭವಿಸಿದ್ದು, ಬಜಪೆ-ಅದ್ಯಪಾಡಿಯ ಸಂಪರ್ಕ ಕಡಿತಗೊಂಡಿದೆ. ಮಂಗಳೂರು ವಿಮಾನನಿಲ್ದಾಣ ಕೆಳಭಾಗದಲ್ಲಿ ಅದ್ಯಪಾಡಿ ಪ್ರದೇಶ ಇದೆ.

ವಿಮಾನ ನಿಲ್ದಾಣ ಭಾಗದಿಂದ ಮಣ್ಣು ನೀರು ಹರಿದುಬಂದಿದೆ. ಗುಡ್ಡದ ಕೆಳಭಾಗದ ಉಮಾನಾಥ ಸಾಲ್ಯಾನ್ ಎಂಬವರ ಮನೆಗೆ ಹಾನಿಯಾಗಿದೆ. ಮನೆಯ ಮುಂಭಾಗದ ಅಂಗಳದಲ್ಲಿ ಮಣ್ಣು ಕೆಸರು ತುಂಬಿಕೊಂಡಿದೆ.

Share This Article