ಗಂಟೆಗೆ 120 ಕಿಮೀ ವೇಗದಲ್ಲಿ ಬೀಸುತ್ತಿದೆ ಗಾಳಿ – `ಗಜ’ ರೌದ್ರನರ್ತನಕ್ಕೆ 20ಕ್ಕೂ ಹೆಚ್ಚು ಮಂದಿ ಬಲಿ

Public TV
1 Min Read

ಚೆನ್ನೈ: ಗಂಟೆಗೆ 120 ಕಿಮೀ ವೇಗದಲ್ಲಿ ತೀರಕ್ಕೆ ಅಪ್ಪಳಿಸುತ್ತಿರುವ ಗಜ ಚಂಡಮಾರುತಕ್ಕೆ ತಮಿಳುನಾಡು ತತ್ತರಿಸಿದ್ದು, ಇದುವರೆಗೂ 20ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.

ಗಜ ಚಂಡಮಾರುತದಿಂದ ತಮಿಳುನಾಡಿನ ಸಮುದ್ರ ತೀರ ಪ್ರದೇಶಗಳಲ್ಲದೇ ನಾಗಪಟ್ಟಣಂ, ಕರೈಕಲ್, ಕಡಲೂರು, ಪುದುಚ್ಚೇರಿ, ತಂಜಾವೂರು ಪ್ರದೇಶಗಳನ್ನು ತಲುಪಿದ್ದು, ಚಂಡಮಾರುತದ ದಾಳಿಗೆ ಜನರು ತತ್ತರಿಸಿ ಕಂಗಲಾಗಿದ್ದಾರೆ.

2004ರ ಭೀಕರ ಸುನಾಮಿ ಸಂಭವಿಸಿದ ದಶಕದ ಬಳಿಕ ನಾಗಪಟ್ಟಣಂನಲ್ಲಿ ಮತ್ತೆ ಅಲ್ಲೋಲ ಕಲ್ಲೋಲ ವಾತಾವರಣ ನಿರ್ಮಾಣವಾಗಿದ್ದು, ತಮಿಳುನಾಡಿನ ಹಲವೆಡೆ ನೂರಾರು ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿವೆ. ಅಲ್ಲದೇ ಸಾವಿರಾರು ಮನೆಗಳಿಗೆ ಹಾನಿ ಆಗಿದೆ.

ಇದುವರೆಗೂ ತಮಿಳುನಾಡಿನ ಒಟ್ಟು 6 ಜಿಲ್ಲೆಗಳಲ್ಲಿ ಸುಮಾರು 80 ಸಾವಿರ ಮಂದಿಯನ್ನು ರಕ್ಷಿಸಲಾಗಿದ್ದು ಅವರಿಗಾಗಿ 300 ಆಶ್ರಯತಾಣಗಳನ್ನು ತೆರೆಯಲಾಗಿದೆ. ನಾಗಪಟ್ಟಣಂನಲ್ಲಿ ಇಂದೂ ಕೂಡಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜೊತೆಗೆ ಅಪಾಯದಲ್ಲಿ ಸಿಲುಕಿರುವವರ ಸಹಾಯಕ್ಕೆ ರಾಜ್ಯ ಮಟ್ಟದಲ್ಲಿ 1070 ಹಾಗೂ ಜಿಲ್ಲೆಗಳಲ್ಲಿ 1077 ಸಹಾಯವಾಣಿಯನ್ನು ನೀಡಲಾಗಿದೆ.

ಗಜ ಚಂಡಮಾರುತದಿಂದ ತತ್ತರಿಸಿರುವ ತಮಿಳುನಾಡಿಗೆ ಕೇಂದ್ರ ಗೃಹ ಸಚಿವ ರಾಜ್‍ನಾಥ್ ಸಿಂಗ್ ರಕ್ಷಣಾ ಕ್ರಮಕೈಗೊಳ್ಳಲು ಮುಂದಾಗಿದ್ದು, ಗೃಹ ಇಲಾಖೆಯ ನಿರ್ದೇಶಕರಾಗಿರುವ ರಾಜೀವ್ ಅವರಿಗೆ ಸೂಚನೆ ನೀಡಿದ್ದಾರೆ. ಈ ಕುರಿತು ತಮಿಳುನಾಡು ಸಿಎಂ ಪಳನಿಸ್ವಾಮಿ ಅವರಿಂದ ಮಾಹಿತಿ ಪಡೆದಿದ್ದು, ಸನ್ನಿವೇಶದ ಮೇಲ್ವಿಚಾರಣೆ ಹಾಗೂ ಸಹಕಾರ ನೀಡಲಾಗುತ್ತಿದೆ ಎಂದು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ಇತ್ತ ಸಿಎಂ ಕೂಡ ರಾಜ್ಯದ ಜನರ ರಕ್ಷಣೆಗೆ ಮುಂದಾಗಿದ್ದು, ಅಪಾಯದಲ್ಲಿ ಸಿಲುಕಿರುವ ರಕ್ಷಣೆ ಹಾಗೂ ಸಂತ್ರಸ್ತರ ನೆರವಿಗೆ ಧಾವಿಸಿ ಎಂದು ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Share This Article
Leave a Comment

Leave a Reply

Your email address will not be published. Required fields are marked *