ಆಂಧ್ರ, ಒಡಿಶಾಗೆ ಚಂಡಮಾರುತ ಅಪ್ಪಳಿಸುವ ಭೀತಿ- ಮುಂಬೈನಲ್ಲಿ ಭಾರಿ ಮಳೆ ಸಾಧ್ಯತೆ

Public TV
1 Min Read

ನವದೆಹಲಿ: ಉತ್ತರ ಗುಜರಾತ್‌, ಉತ್ತರ ಮತ್ತು ವಾಯುವ್ಯ ಮಹಾರಾಷ್ಟ್ರದಲ್ಲಿ ಇಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆಯಿಂದಾಗಿ ಪಾಲ್ಘರ್‌, ಥಾಣೆ, ಮುಂಬೈನಲ್ಲಿ ಹೆಚ್ಚು ಹಾನಿಯಾಗುವ ಸಾಧ್ಯತೆ ಇದೆ. ಡಿ.4ರಂದು ಆಂಧ್ರಪ್ರದೇಶ ಮತ್ತು ಒಡಿಶಾ ಕರಾವಳಿಗೆ ಚಂಡಮಾರುತ ಅಪ್ಪಳಿಸಲಿದೆ ಎಂದು ತಿಳಿಸಿದೆ.

ಮುಂದಿನ 12 ಗಂಟೆಗಳಲ್ಲಿ ಅಂಡಮಾನ್‌ ಸಮುದ್ರದಲ್ಲಿ ಕಡಿಮೆ ಒತ್ತಡ ಸೃಷ್ಟಿಯಾಗಲಿದೆ. ಇದು ವಾಯುಭಾರ ಕುಸಿತಕ್ಕೆ ಕಾರಣವಾಗಿ 24 ಗಂಟೆಗಳಲ್ಲಿ ಬಂಗಾಳಕೊಲ್ಲಿಯ ಮಧ್ಯ ಭಾಗದಲ್ಲಿ ಚಂಡಮಾರುತ ತೀವ್ರಗೊಳ್ಳಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದನ್ನೂ ಓದಿ: ಶಾಲೆಯಲ್ಲಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ- ಮೂರು ಮಕ್ಕಳು ಸಾವು

ಡಿ.4 ರಂದು ಬೆಳಿಗ್ಗೆ ಚಂಡಮಾರುತವು ಉತ್ತರ ಆಂಧ್ರ ಪ್ರದೇಶ ಮತ್ತು ಒಡಿಶಾದ ಕರಾವಳಿ ಪ್ರದೇಶಗಳನ್ನು ತಲುಪಲಿದೆ. ಹೀಗಾಗಿ ಒಡಿಶಾದ ಹಲವೆಡೆ ಪಶ್ಚಿಮ ಬಂಗಾಳದ ಕರಾವಳಿ ಜಿಲ್ಲೆಗಳು, ಆಂಧ್ರಪ್ರದೇಶದ ಉತ್ತರ ಕರಾವಳಿಯ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಇದನ್ನೂ ಓದಿ: ಜನಸಾಮಾನ್ಯರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್ – ಇಂದಿನಿಂದ ಆಟೋ ದರ ಕಾಸ್ಟ್ಲಿ

ಡಿ.5 ಮತ್ತು 6 ರಂದು ಈಶಾನ್ಯ ರಾಜ್ಯಗಳಲ್ಲೂ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

Share This Article
Leave a Comment

Leave a Reply

Your email address will not be published. Required fields are marked *