ಅನಿಲ ಸೋರಿಕೆ ತಡೆಗಟ್ಟಲು ಹೋದ ವೇಳೆ ಸಿಲಿಂಡರ್ ಸ್ಫೋಟ!

Public TV
1 Min Read

ಚಾಮರಾಜನಗರ: ಗ್ಯಾಸ್ ಏಜೆನ್ಸಿ ಸಿಬ್ಬಂದಿ ಅಡುಗೆ ಅನಿಲ ಸೋರಿಕೆ ತಡೆಗಟ್ಟಲು ಹೋದ ವೇಳೆ ಸಿಲಿಂಡರ್ ಸ್ಫೋಟಗೊಂಡು ಮನೆ ಆಹುತಿಯಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಹೆಗ್ಗವಾಡಿ ಗ್ರಾಮದಲ್ಲಿ ಜರುಗಿದೆ.

ಗ್ರಾಮದ ನಾಗರಾಜು ಮನೆಯಲ್ಲಿ ಗ್ಯಾಸ್ ಸೋರಿಕೆ ಆಗುತ್ತಿದ್ದ ಹಿನ್ನೆಲೆಯಲ್ಲಿ, ನಾಗರಾಜು ಗ್ಯಾಸ್ ಏಜೆನ್ಸಿಗೆ ಫೋನ್ ಮೂಲಕ ವಿಷಯ ತಿಳಿಸಿದ್ದಾರೆ. ನಂತರ ಮನೆಗೆ ಬಂದ ಗ್ಯಾಸ್ ಏಜೆನ್ಸಿ ಸಿಬ್ಬಂದಿ ಸಿಲಿಂಡರ್ ನ ಸೋರಿಕೆ ತಡೆಗಟ್ಟುವಲ್ಲಿ ಮುಂದಾಗಿದ್ದಾನೆ. ಈ ವೇಳೆ ಇದ್ದಕ್ಕಿದ್ದ ಹಾಗೆ ಗ್ಯಾಸ್ ಸ್ಫೋಟಗೊಂಡಿದೆ.

ಅದೃಷ್ಟವಶಾತ್ ಗ್ಯಾಸ್ ಏಜೆನ್ಸಿ ಸಿಬ್ಬಂದಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಚಾಮಾರಾಜನಗರ ಗ್ರಾಮಾಂತರ ಆಸ್ಪತ್ರೆಯಲಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿಲಿಂಡರ್ ಸ್ಫೋಟಗೊಂಡ ಕಾರಣ ಮನೆಯಲ್ಲಿದ್ದ ಅನೇಕ ವಸ್ತಗಳು ಸುಟ್ಟು ಕರಕಲಾಗಿವೆ.

ಈ ಬಗ್ಗೆ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *