ನಾಳೆ KSRTC, ಬಿಎಂಟಿಸಿ ಬಸ್ ಇರುತ್ತಾ – ಸಾರಿಗೆ ಸಚಿವರು ಹೇಳೋದು ಏನು

Public TV
1 Min Read

ಮಂಡ್ಯ: ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿದ ಭಾರತ್ ಬಂದ್ ಗೆ ಸಹಕಾರ ನೀಡುವುದಾಗಿ ಸಾರಿಗೆ ಸಚಿವ ಡಿಸಿ.ತಮ್ಮಣ್ಣ ಹೇಳಿದ್ದಾರೆ.

ಮದ್ದೂರಿನಲ್ಲಿ ಮಾತನಾಡಿದ ಅವರು, ಅನೇಕ ಸಂಘ ಸಂಸ್ಥೆಗಳು ಬಂದ್‍ಗೆ ಕರೆ ನೀಡಿವೆ. ಹೀಗಾಗಿ ಸಾರಿಗೆ ಇಲಾಖೆಯ ನೌಕರರು ಸಹಕರಿಸುತ್ತಾರೆ ಎಂದು ತಿಳಿಸಿದರು.

ಸರ್ಕಾರದ ಬೆಂಬಲ ಎಂದು ಹೇಳುತ್ತಿಲ್ಲ. ಕಾರ್ಮಿಕರ ಹಿತದೃಷ್ಟಿಯಿಂದ ಅಖಿಲ ಭಾರತ ಮಟ್ಟದಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. ಅದಕ್ಕೆ ನಾವು ಕೂಡ ಸಹಕರಿಸುತ್ತಿದ್ದೇವೆ. ನಾಳೆ ಬಸ್ ಸಂಚಾರದ ಬಗ್ಗೆ ಪರಿಸ್ಥಿತಿ ನೋಡಿ ತೀರ್ಮಾನಕ್ಕೆ ಬರುತ್ತೇವೆ. ಆದರೆ ಬಂದ್ ಇರುವುದರಿಂದ ಸಾರಿಗೆ ವ್ಯವಸ್ಥೆ ಕಷ್ಟ ಎಂದು ಹೇಳಿದರು.

ಸಾರ್ವಜನಿಕರ ಹಿತದೃಷ್ಟಿಯಿಂದ ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರೆ ಮಾತ್ರ ಬಸ್ ಸಂಚಾರ ಇರುತ್ತೆ. ಇಲ್ಲದಿದ್ರೆ ಬಸ್ ಸಂಚಾರ ಇರುವುದಿಲ್ಲ ಎಂದು ತಿಳಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *