ಡಿಸಿಎಂ ಕಾರ್ಯಕ್ರಮದಲ್ಲಿ ಡಿಕೆಶಿ ಪರ ಘೋಷಣೆ

Public TV
1 Min Read

ತುಮಕೂರು: ಡಿಸಿಎಂ ಅಶ್ವಥ್ ನಾರಾಯಣ ಭಾಗಹಿಸಿದ್ದ ಕಾರ್ಯಕ್ರಮದಲ್ಲಿ ಕೆಲವರು ಇಡಿ ಬಂಧನದಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಪರ ಘೋಷಣೆ ಕೂಗಿದರು. ಇಂದು ಜಿಲ್ಲೆಯ ನೊಣವಿನಕೆರೆಯಲ್ಲಿ ಆದಿಚುಂಚನಗಿರಿ ಸಮುದಾಯ ಭವನದ ಉದ್ಘಾಟನೆಗೆ ಆಗಮಿಸಿದ್ದ ವೇಳೆ ಡಿಸಿಎಂ ಅಶ್ವಥ್ ನಾರಾಯಣ ಮುಜುಗರಕ್ಕೊಳಗಾದರು.

ಕಾರ್ಯಕ್ರಮದ ಉದ್ಘಾಟನೆಗೆ ಅಶ್ವಥ್ ನಾರಾಯಣ ಆಗಮಿಸುತ್ತಿದ್ದಂತೆ ನೆರೆದಿದ್ದ ಜನಸ್ತೋಮ ಡಿಕೆ ಎಂದು ಘೋಷಣೆ ಕೂಗಲಾರಂಭಿಸಿದರು. ಸಮುದಾಯದ ಭವನದೊಳಗೆ ದೇವತಾ ಕಾರ್ಯಗಳು ನಡೆಯುತ್ತಿದ್ದರೂ ಸುಮಾರು 20 ನಿಮಿಷಗಳ ಕಾಲ ಡಿ.ಕೆ.ಶಿವಕುಮಾರ್ ಘೋಷಣೆ ಕೂಗಿದರು. ಇದೇ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಹ ಭಾಗಿಯಾಗಿದ್ದರು.

ಕಾರ್ಯಕ್ರಮ ಬಳಿಕ ಮಾತನಾಡಿದ ಅಶ್ವಥ್ ನಾರಾಯಣ, ಜನರು ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ. ಸಮಾಜದಲ್ಲಿ ಕಾನೂನುಗಳನ್ನು ಪಾಲನೆ ಮಾಡೋದು ನಮ್ಮ ಕರ್ತವ್ಯ. ರಮಾನಾಥ್ ರೈ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ, ಅಖಂಡ ಭಾರತ ನಮ್ಮ ಗುರಿ. ಅಫ್ಘಾನಿಸ್ತಾನದವರೆಗೂ ಭಾರತ ಇತ್ತು. ಹಾಗಾಗಿ ಎಲ್ಲರನ್ನು ಒಟ್ಟುಗೂಡಿಸುವ ಕೆಲಸವನ್ನ ಮಾಡಲಿದ್ದೇವೆ ಎಂದರು.

Share This Article
Leave a Comment

Leave a Reply

Your email address will not be published. Required fields are marked *