ಚಾಣಕ್ಯನಿಗೆ ಪ್ರತಿಭಟನೆ ಬಿಸಿ – ಗದ್ದಲದ ಗೂಡಾಯ್ತು ಮೈಸೂರಿನ ಸಂವಾದ ಕಾರ್ಯಕ್ರಮ

Public TV
1 Min Read

ಮೈಸೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭಾಗವಹಿಸಿದ್ದ ದಲಿತ ಮುಖಂಡರ ನಡುವಿನ ಸಂವಾದ ಸಮಾವೇಶದಲ್ಲಿ ಕೇಂದ್ರ ಸಚಿವ ಅನಂತಕುಮಾರ ಹೆಗ್ಡೆ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ಮೈಸೂರಿನ ರಾಜೇಂದ್ರ ಕಲಾಮಂದಿರದಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಸಂವಿಧಾನ ಬದಲಾವಣೆ ಹೇಳಿಕೆ ಚರ್ಚೆಗೆ ಕಾರಣವಾಯಿತು. ಈ ಕುರಿತು ಚರ್ಚೆ ವೇಳೆ ಅಮಿತ್ ಶಾ ಅವರು ಪ್ರತಿಕ್ರಿಯೆ ನೀಡಿ, ಸಚಿವರ ಹೇಳಿಕೆಗೂ ಬಿಜೆಪಿಗೂ ಸಂಬಂಧವಿಲ್ಲವೆಂದು ಹೇಳಿದರು. ಇದರಿಂದ ಕೆರಳಿದ ದಲಿತ ಹೋರಾಟಗಾರ ಚೊರನಹಳ್ಳಿ ಶಿವಣ್ಣ ಅಮಿತ್ ಶಾ ಹೇಳಿಕೆಗೆ ಬಹಿರಂಗವಾಗಿ ವಿರೋಧ ವ್ಯಕ್ತಪಡಿಸಿದರು. ಈ ಘಟನೆ ಸಂವಾದ ಕಾರ್ಯಕ್ರಮದಲ್ಲಿ ಕೆಲಕಾಲ ಬಿಜೆಪಿ ಮುಖಂಡರು ಹಾಗೂ ಶಿವಣ್ಣ ನಡುವೆ ಮಾತಿನ ಚಕಮಕಿಗೆ ಕಾರಣಯಿತು.

ತಕ್ಷಣ ಮಧ್ಯ ಪ್ರವೇಶಿಸಿದ ಪೊಲೀಸರು ಶಿವಣ್ಣ ಅವರನ್ನು ಬಲವಂತವಾಗಿ ಸಂವಾದ ಕಾರ್ಯಕ್ರಮದಿಂದ ಹೊರಕ್ಕೆ ಕರೆದೊಯ್ದರು. ಈ ವೇಳೆ ಅನಂತ ಕುಮಾರ್ ಹೆಗ್ಡೆ ಅವರನ್ನು ಪಕ್ಷದಿಂದ ಅಮಾನತು ಮಾಡುವಂತೆ ಶಿವಣ್ಣ ಆಗ್ರಹಿಸಿದರು.

ಘಟನೆ ಕುರಿತು ಪ್ರತಿಕ್ರಿಯೆ ನೀಡಿದ ರಾಜ್ಯ ಬಿಜೆಪಿ, ಅಮಿತ್ ಶಾ ಅವರು ಭಾಗವಹಿಸಿದ್ದ ದಲಿತ ಸಂವಾದ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಅವರು ಗುಂಡಾಗಳನ್ನು ಕಳುಹಿಸಿದ್ದಾರೆ ಎಂದು ಆರೋಪಿಸಿ ಟ್ವೀಟ್ ಮಾಡಿದೆ. ದೇಶದಲ್ಲಿ ದಲಿತರಿಗೆ ಬಿಜೆಪಿ ಪ್ರಮುಖ ಪಕ್ಷವಾಗಿರುವುದನ್ನು ಅರಗಿಸಲು ಸಾಧ್ಯವಾಗದೇ ಸಿಎಂ ಇಂದು ಸಣ್ಣತನದ ಗಿಮಿಕ್ ಮಾಡಿದ್ದಾರೆ. ಅಮಿತ್ ಶಾ ಅವರ ಸಾರ್ವಜನಿಕ ಸಂವಾದ ಕಾರ್ಯಕ್ರಮದ ವೇಳೆ ಕೆಲ ಗುಂಡಾಗಳನ್ನು ಕಳುಹಿಸಿದ್ದಾರೆ. ಮಮತಾ ಬ್ಯಾನರ್ಜಿ ಹಾಗೂ ಸಿಎಂ ಸಿದ್ದರಾಮಯ್ಯ ನಡುವೆ ಈ ವಿಚಾರದಲ್ಲಿ ಯಾರು ಉತ್ತಮ ಎನ್ನುವ ಸ್ಪರ್ಧೆ ನಡೆಯುತ್ತಿದೆ ಎಂದು ಟ್ವೀಟ್ ಮಾಡಿ ತಿರುಗೇಟು ನೀಡಿದೆ.

Share This Article
Leave a Comment

Leave a Reply

Your email address will not be published. Required fields are marked *