ಮಂಡ್ಯ | ದಲಿತ ಸಮುದಾಯದಿಂದಲೇ ದಲಿತರಿಗೆ ಬಹಿಷ್ಕಾರ ಆರೋಪ; ಗ್ರಾಮದ 7 ಕುಟುಂಬಕ್ಕೆ ಶಿಕ್ಷೆ

Public TV
1 Min Read

– ಕುಲದ ವಿರುದ್ಧ ಮಾತನಾಡಿದ್ದಕ್ಕೆ ಬಹಿಷ್ಕಾರ

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಂಜಾಮ್ ಗ್ರಾಮದ ಅಂಬೇಡ್ಕರ್ ಕಾಲೋನಿಯಲ್ಲಿ ದಲಿತ ಸಮುದಾಯವೇ (Dalit Community) ದಲಿತರನ್ನು ಬಹಿಷ್ಕರಿಸಿರುವ ಆರೋಪ ಕೇಳಿ ಬಂದಿದೆ.

ಕಾಲೋನಿಯ 7 ಕುಟುಂಬಗಳು ಬಹಿಷ್ಕಾರಕ್ಕೆ ಒಳಗಾಗಿದ್ದು, ಕುಟುಂಬಗಳ ಜೊತೆ ನೆರೆ ಹೊರೆಯವರು ಮಾತನಾಡದಂತೆ ಕುಲದ ಮುಖಂಡರು ಆದೇಶ ಮಾಡಿದ್ದಾರೆ. ಇದೀಗ ಬಹಿಷ್ಕಾರಕ್ಕೊಳಗಾದ (Social Exclusion) ಕುಟುಂಬಗಳು ಕಾನೂನು ಹೋರಾಟ ನಡೆಸಲು ಮುಂದಾಗಿದ್ದಾರೆ.

ಕುಲದ ವಿರುದ್ಧ ಮಾತನಾಡಿದ ಕಾರಣಕ್ಕೆ 7 ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ. ಬಹಿಷ್ಕಾರಕ್ಕೊಳಗಾದ ಕುಟುಂಬಗಳ ಜೊತೆ ನೆರೆ ಹೊರೆಯವರು ಮಾತನಾಡದಂತೆ ಆದೇಶ ಮಾಡಲಾಗಿದೆ.

ತಮ್ಮದೇ ಸಮುದಾಯದವರಿಂದ ಸಾಮಾಜಿಕ ಬಹಿಷ್ಕಾರದ ಶಿಕ್ಷೆಗೆ ಗುರಿಯಾಗಿರುವ ಕುಟುಂಬಗಳೀಗ ಸಿಡಿದೆದ್ದಿವೆ. ಈ ಹಿನ್ನೆಲೆ ತಮಗಾದ ಅನ್ಯಾಯವನ್ನು ಅರಿತು, ತಮ್ಮ ನೆರವಿಗೆ ಬರುವಂತೆ ಸರ್ಕಾರ ಸೇರಿದಂತೆ ಡಿಸಿ, ಎಸ್ಪಿ ಹಾಗೂ ತಾಲೂಕು ಆಡಳಿತಕ್ಕೆ ಬಹಿಷ್ಕಾರಕ್ಕೊಳಗಾದ ಕುಟುಂಬಗಳು ಮನವಿ ಮಾಡಿವೆ.

Share This Article