ಬಿಜೆಪಿ ನಾಯಕರು ನಮಿಸಿದ್ದಕ್ಕೆ ಅಂಬೇಡ್ಕರ್ ಪ್ರತಿಮೆಗೆ ಶುದ್ಧಿ ಕಾರ್ಯ!

Public TV
1 Min Read

ವಡೋದರ: 127 ನೇ ಅಂಬೇಡ್ಕರ್ ಜಯಂತಿ ಪ್ರಯುಕ್ತ ಅಂಬೇಡ್ಕರ್ ಪ್ರತಿಮೆ ಬಿಜೆಪಿ ನಾಯಕರು ನಮನ ಸಲ್ಲಿಸಿದ ಬಳಿಕ ಪ್ರತಿಮೆಯನ್ನು ಶುದ್ಧೀಕರಣಗೊಳಿಸಿರುವ ಘಟನೆ ಗುಜರಾತ್ ನ ವಡೋದರದಲ್ಲಿ ನಡೆದಿದೆ.

ಕೇಂದ್ರ ಸಚಿವೆಯಾದ ಮನೇಕಾ ಗಾಂಧಿ ಸೇರಿದಂತೆ ಹಲವು ಬಿಜೆಪಿ ನಾಯಕರು ಅಂಬೇಡ್ಕರ್ ಪ್ರತಿಮೆ ಬಳಿ ತೆರಳಿ ನಮನ ಸಲ್ಲಿಸಿದ್ದರು. ಇತ್ತ ಬಿಜೆಪಿ ನಾಯಕರು ಸ್ಥಳದಿಂದ ಹಿಂದಿರುಗುತ್ತಿದ್ದಂತೆ ದಲಿತ ಮುಖಂಡರು ಪ್ರತಿಮೆಯನ್ನು ಹಾಲಿನಿಂದ ಶುದ್ಧಿಗೊಳಿಸಿದರು.

ಬಿಜೆಪಿ ಮುಖಂಡರು ಆಗಮನಕ್ಕೂ ಮುನ್ನವೇ ಅಂಬೇಡ್ಕರ್ ಪ್ರತಿಮೆಗೆ ನಮನ ಸಲ್ಲಿಸಲು ಬಂದ ಬಿಜೆಪಿ ನಾಯಕರ ವಿರುದ್ಧ ಘೋಷಣೆ ಕೂಗುವ ಮೂಲಕ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಈ ಕುರಿತು ಪ್ರತಿಕ್ರಿಯೆ ನೀಡಿದ ದಲಿತ ಮುಖಂಡರೊಬ್ಬರು ಬಿಜೆಪಿ ನಾಯಕರು ನಮನ ಸಲ್ಲಿಸಿದ್ದರಿಂದ ಪ್ರತಿಮೆ ಅಪವಿತ್ರವಾಗಿದೆ. ಆದ್ದರಿಂದ ಹಾಲಿನಿಂದ ಶುದ್ಧೀಕರಿಸಿದ್ದೇವೆ ಎಂದು ಹೇಳಿದ್ದಾರೆ.

ಬಿಜೆಪಿ ನಾಯಕರು ಸ್ಥಳಕ್ಕೆ ಆಗಮಿಸುವ ಮುನ್ನವೇ ನಾವು ಅಂಬೇಡ್ಕರ್ ಪ್ರತಿಮೆಗೆ ನಮನ ಸಲ್ಲಿಸಲು ಮುಂದಾಗಿದ್ದೆವು, ಆದರೆ ಪೊಲೀಸರು ಬಿಜೆಪಿ ನಾಯಕರು ಆಗಮಿಸುತ್ತಾರೆ ಎಂಬ ಕಾರಣದಿಂದ ನಮಗೆ ಅಡ್ಡಿಪಡಿಸಿದ್ದರು ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಪ್ರಕಾಶ್ ರೈ ಭಾಗವಹಿಸಿದ್ದ ಕಾರ್ಯಕ್ರಮದ ವೇದಿಕೆಯನ್ನು ಶುದ್ಧಗೊಳಿಸಿದ ಬಿಜೆಪಿ

Share This Article
Leave a Comment

Leave a Reply

Your email address will not be published. Required fields are marked *