ಹಂಪಿ ಸ್ಮಾರಕಗಳಿಗೆ ಹಾನಿ – ಮುಜರಾಯಿ ಇಲಾಖೆ ಸಿಬ್ಬಂದಿ ಅಮಾನತು

Public TV
1 Min Read

ಬಳ್ಳಾರಿ: ವಿಜಯನಗರ ಜಿಲ್ಲೆಯ ಹೊಸಪೇಟೆಯ ವಿಶ್ವವಿಖ್ಯಾತ ಹಂಪಿಯ (Hampi) ಸ್ಮಾರಕಗಳನ್ನು ಹಾಳು ಮಾಡಿದ ಸಿಬ್ಬಂದಿಯನ್ನು ಮುಜರಾಯಿ ಇಲಾಖೆ (Muzrai Department) ಅಮಾನತು ಮಾಡಿದೆ.

ಆರು ದಿನಗಳ ಹಿಂದೆ ಹಂಪಿಯ ವಿರೂಪಾಕ್ಷ ದೇವಾಲಯದ (Virupaksha Temple) ಬಲ ಭಾಗದಲ್ಲಿ ದ್ವಾರದಲ್ಲಿ ಡ್ರಿಲ್ ಯಂತ್ರದ (Drill Machine) ಮೂಲಕ ಮೊಳೆ ಹೊಡೆದು ಸ್ಮಾರಕಗಳನ್ನು ಹಾಳು ಮಾಡಲಾಗಿತ್ತು. ಈ ಕುರಿತು ಪಬ್ಲಿಕ್ ಟಿವಿ ವರದಿ ಪ್ರಸಾರ ಮಾಡಿತ್ತು.  ಇದನ್ನೂ ಓದಿ: ಕೊಳಚೆ ಪ್ರದೇಶದಲ್ಲಿ ಮುಕ್ಕಾಲು ಕೆಜಿ ಚಿನ್ನ ಬಚ್ಚಿಟ್ಟಿದ್ದ ಖದೀಮ – 18 ಅರೆಸ್ಟ್ ವಾರೆಂಟ್ ಇದ್ದ ಸೆಲೆಬ್ರಿಟಿ ಮನೆಗಳ್ಳನ ಬಂಧನ

 

ವರದಿ ಬೆನ್ನಲ್ಲೇ ವಿಜಯನಗರ ಜಿಲ್ಲಾಧಿಕಾರಿ ದಿವಾಕರ ಅವರು ಖುದ್ದು ಸ್ಥಳ ಪರಿಶೀಲನೆ ನಡೆಸಿ ಸೂಕ್ತ ಕಾನೂನು ಕ್ರಮಕ್ಕೆ ಸೂಚನೆ ನೀಡಿದ್ದರು. ಇದನ್ನೂ ಓದಿ: ಅಮ್ಮ ನನ್ನ ಬಗ್ಗೆ ಚಿಂತಿಸಬೇಡ, ಸಮಯಕ್ಕೆ ಸರಿಯಾಗಿ ಊಟ ಮಾಡಿ – ಸುರಂಗದಲ್ಲಿ ಸಿಲುಕಿದ ಕಾರ್ಮಿಕನ ಭಾವುಕ ಸಂದೇಶ

ದೇವಸ್ಥಾನದ ಬಲಭಾಗದಲ್ಲಿ ಜನರ ಸುಗಮ ಸಂಚಾರಕ್ಕೆ ಬ್ಯಾರಿಕೇಡ್‌ ನಿರ್ಮಾಣ ಮಾಡಲು ಸಿಬ್ಬಂದಿ ಶ್ರೀನಿವಾಸ ಅವರು ಡ್ರಿಲ್‌ ಯಂತ್ರದ ಮೂಲಕ ಕೊರೆದು ಸ್ಮಾರಕವನ್ನು ಹಾಳು ಮಾಡಿದ್ದರು.

ಹಂಪಿಯಲ್ಲಿ ಯಾವುದೇ ಒಂದು ಅಭಿವೃದ್ಧಿ ಕೆಲಸ ಮಾಡಲು ರಾಜ್ಯ ಪುರಾತತ್ವ ಇಲಾಖೆಯ ಅನುಮತಿ ಪಡೆಯಲೇ ಬೇಕು. ಆದರೆ ಯಾವುದೇ ಅನುಮತಿ ಪಡೆಯದೇ ಸ್ಮಾರಕಕ್ಕೆ ಹಾನಿ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಇಲಾಖೆ ಶ್ರೀನಿವಾಸ ಅವರನ್ನು ಅಮಾನತು ಮಾಡಿ ಆದೇಶಿಸಿದೆ.

 

Share This Article