ದೇವೇಗೌಡರಿಗೆ ಶಾಕ್ ಕೊಟ್ಟು ಬಿಎಸ್‍ಪಿ ಸೇರ್ಪಡೆಯಾದ ಡ್ಯಾನಿಶ್ ಅಲಿ

Public TV
1 Min Read

– ಡ್ಯಾನಿಶ್ ಪಕ್ಷ ಬಿಟ್ಟಿಲ್ಲ: ಜೆಡಿಎಸ್

ಬೆಂಗಳೂರು: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರಿಗೆ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಶ್ ಅಲಿ ಬಿಗ್ ಶಾಕ್ ಕೊಟ್ಟಿದ್ದಾರೆ.

ಡ್ಯಾನಿಶ್ ಅಲಿ ಅವರು ಇಂದು ಜೆಡಿಎಸ್‍ಗೆ ಗುಡ್‍ಬೈ ಹೇಳಿ ಬಹುಜನ ಸಮಾಜ ಪಕ್ಷ (ಬಿಎಸ್‍ಪಿ) ಸೇರ್ಪಡೆಯಾಗಿದ್ದಾರೆ. ಈ ಬೆಳವಣಿಗೆ ಎಚ್.ಡಿ.ದೇವೇಗೌಡ ಅವರಿಗೆ ಬಿಗ್ ಶಾಕ್ ಕೊಟ್ಟಂತಾಗಿದೆ. ಇಂದು ಉತ್ತರ ಪ್ರದೇಶದ ಲಕ್ನೋನಲ್ಲಿ ಬಿಎಸ್‍ಪಿಯ ಪ್ರಧಾನ ಕಾರ್ಯದರ್ಶಿ ಸತೀಶ್ ಮಿಶ್ರಾ ಸಮ್ಮುಖದಲ್ಲಿ ಡ್ಯಾನಿಶ್ ಅಲಿ ಸೇರ್ಪಡೆಯಾಗಿದ್ದಾರೆ.

ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಯ ಸರ್ಕಾರ ರಚನೆಯಲ್ಲಿ ಡ್ಯಾನಿಶ್ ಅಲಿ ಪ್ರಮುಖ ಪಾತ್ರ ಹೊಂದಿದ್ದರು. ಅಷ್ಟೇ ಅಲ್ಲದೆ ಇತ್ತೀಚೆಗೆ ನಡೆದಿದ್ದ ಕರ್ನಾಟಕ ಲೋಕಸಭಾ ಸೀಟುಗಳ ಹಂಚಿಕೆ ವಿಚಾರವಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಜೊತೆಗೆ ಡ್ಯಾನಿಶ್ ಅಲಿ ಮಾತುಕತೆ ನಡೆಸಿದ್ದರು. ರಾಷ್ಟ್ರಮಟ್ಟದಲ್ಲಿ ಜೆಡಿಎಸ್‍ಗೆ ಡ್ಯಾನಿಶ್ ಅಲಿ ಬೆನ್ನೆಲುಬಾಗಿದ್ದರು.

ರಾಜ್ಯದಲ್ಲಿ ಬಿಎಸ್‍ಪಿ ಹಾಗೂ ಜೆಡಿಎಸ್ ಮೈತ್ರಿಯಿದೆ. ಹೀಗಾಗಿ ರಾಜ್ಯದಲ್ಲಿ ಕಾಂಗ್ರೆಸ್ ಜೊತೆಗೆ ಸರ್ಕಾರ ರಚನೆ ಮಾಡಿದ್ದಾಗಲೂ ಬಿಎಸ್‍ಪಿ ಶಾಸಕ ಎನ್.ಮಹೇಶ್ ಅವರಿಗೆ ಸಚಿವ ಸ್ಥಾನ ನೀಡಲಾಗಿತ್ತು. ಹೀಗಾಗಿ ಉತ್ತರ ಪ್ರದೇಶದ ಕ್ಷೇತ್ರವೊಂದರಲ್ಲಿ ಡ್ಯಾನಿಶ್ ಅಲಿ ಸ್ಪರ್ಧಿಸುವ ಇಚ್ಛೆ ಹೊಂದಿದ್ದಾರೆ. ಈ ನಿಟ್ಟಿನಲ್ಲಿ ಬಿಎಸ್‍ಪಿ ನಾಯಕರ ಜೊತೆಗೆ ಮಾತುಕತೆ ನಡೆಸುತ್ತಿದ್ದಾರೆ ಎಂದು ಜೆಡಿಎಸ್ ತಿಳಿಸಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *