ಆರೋಗ್ಯ ತಪಾಸಣೆಗೆ ಬಂದ ದರ್ಶನ್- ನಟನನ್ನು ನೋಡಲು ಮುಗಿಬಿದ್ದ ಫ್ಯಾನ್ಸ್‌

Public TV
1 Min Read

ರೇಣುಕಾಸ್ವಾಮಿ ಕೊಲೆ (Renukaswamu Murder Case) ಆರೋಪಿ ದರ್ಶನ್ (Darshan) ಅವರು ಮೈಸೂರಿನ ಕಾಮಾಕ್ಷಿ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆಗೆ ಬಂದಿದ್ದಾರೆ. ಬೆನ್ನು ನೋವಿನ ಸಂಬಂಧ ವೈದ್ಯರನ್ನು ನಟ ಭೇಟಿಯಾಗಿದ್ದಾರೆ. ಇದನ್ನೂ ಓದಿ:ಭಗವಂತ ನನ್ನಷ್ಟೂ ಆಯಸ್ಸನ್ನ ಶಿವಣ್ಣನಿಗೇ ಕೊಡಲಿ: ಧ್ರುವ ಸರ್ಜಾ

ಇಂದು (ಡಿ.24) ಮೈಸೂರಿನ ಕಾಮಾಕ್ಷಿ ಆಸ್ಪತ್ರೆಗೆ ದರ್ಶನ್ ಆರೋಗ್ಯ ತಪಾಸಣೆ ಆಗಮಿಸಿದ್ದಾರೆ. ಬೆನ್ನು ನೋವಿನ ಹಿನ್ನೆಲೆ ಆರೋಗ್ಯ ತಪಾಸಣೆ ಮಾಡಿಸಿದ್ದಾರೆ. ಈ ವೇಳೆ, ದರ್ಶನ್‌ಗೆ ಧನ್ವೀರ್ ಸಾಥ್ ನೀಡಿದ್ದಾರೆ. ಈ ವೇಳೆ, ದರ್ಶನ್‌ ನೋಡಲು ಅಪಾರ ಸಂಖ್ಯೆಯಲ್ಲಿ ಫ್ಯಾನ್ಸ್‌ ಜಮಾಯಿಸಿದ್ದಾರೆ.

ಅಂದಹಾಗೆ, ನಿನ್ನೆ (ಡಿ.23) ವಿಜಯಲಕ್ಷ್ಮಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು. ದರ್ಶನ್‌ಗೆ ಬೇಲ್ ಸಿಕ್ಕ ಹಿನ್ನೆಲೆ ಹರಕೆ ತೀರಿಸಿದರು.

Share This Article