ದರ್ಶನ್ (Darshan) ನಟನೆಯ ‘ಕಾಟೇರ’ ಸಿನಿಮಾ ಸಕ್ಸಸ್ ಕಂಡಿದೆ. ಇದೇ ಖುಷಿಯಲ್ಲಿ ಪಾಂಡವಪುರದಲ್ಲಿ ‘ಕಾಟೇರ’ ಚಿತ್ರದ ಸಕ್ಸಸ್ ಕಾರ್ಯಕ್ರಮ ನಡೆದಿದೆ. ರೈತರ ಕುರಿತು ‘ಕಾಟೇರ’ ಚಿತ್ರದ ಮೂಲಕ ತಿಳಿಸಿದಕ್ಕೆ ದರ್ಶನ್ಗೆ ಕರ್ನಾಟಕ ರಾಜ್ಯ ರೈತ ಸಂಘದ ಪರವಾಗಿ ‘ಭೂಮಿ ಪುತ್ರ’ ಎಂದು ಬಿರುದು ನೀಡಿದ್ದಾರೆ. ಇದನ್ನೂ ಓದಿ:ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಪುತ್ರಿ, ಗಾಯಕಿ ವಿಧಿವಶ

ರೈತರ ಕುರಿತು ಜನರಿಗೆ ಹಲವು ವಿಷಯಗಳನ್ನು ತಲುಪಿಸಿದಕ್ಕೆ ಮತ್ತು ನಟನೆಗೆ ದರ್ಶನ್ ಅವರಿಗೆ ಕರ್ನಾಟಕ ರಾಜ್ಯ ರೈತ ಸಂಘದ ಪರವಾಗಿ ‘ಭೂಮಿ ಪುತ್ರ’ ಎಂದು ಬಿರುದು ನೀಡಿ ಸನ್ಮಾನ ಮಾಡಲಾಗಿದೆ.
ಈ ಸಮಾರಂಭದಲ್ಲಿ ದರ್ಶನ್ ಜೊತೆ ರೈತ ಮುಖಂಡ ಕೆ.ಎಸ್ ಪುಟ್ಟಣ್ಣಯ್ಯ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ನಟಿ ಆರಾಧನಾ ರಾಮ್ ಸೇರಿದಂತೆ ಇಡೀ ಚಿತ್ರತಂಡ ಭಾಗಿಯಾಗಿತ್ತು. ಈ ಕಾರ್ಯಕ್ರಮಕ್ಕೆ ಮತ್ತಷ್ಟು ಕಳೆ ತುಂಬಿದ್ದು, `ಬಿಗ್ ಬಾಸ್’ ಖ್ಯಾತಿಯ ನಮ್ರತಾ ಗೌಡ, ಮಾನ್ವಿತಾ ಕಾಮತ್ (Manvitha Kamath), ಹರ್ಷಿಕಾ ಪೂಣಚ್ಚ ಭಾಗಿಯಾಗಿ ತಮ್ಮ ನೃತ್ಯದ ಮೂಲಕ ಮನರಂಜನೆ ನೀಡಿದ್ದರು.

 
			
 
		 
		 
                                
                              
		