ದರ್ಶನ್‌ ಬಿಡುಗಡೆಗೆ ಕೊಲ್ಲೂರು ದೇವಿಯ ಮೊರೆ ಹೋದ ವಿಜಯಲಕ್ಷ್ಮಿ

Public TV
0 Min Read

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ (Kollur Mookambika Temple) ನಟ ದರ್ಶನ್ (Darshan) ಪತ್ನಿ ವಿಜಯಲಕ್ಷ್ಮಿ (Vijayalakshmi) ಅವರು ಆಪ್ತರ ಜೊತೆ ಆಗಮಿಸಿದ್ದಾರೆ.

ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರಿಗೆ ರಾತ್ರಿ ಆಗಮಿಸಿದ ಅವರು ದೇವಿಯ ದರ್ಶನ ಮಾಡಿದ್ದಾರೆ. ಇದನ್ನೂ ಓದಿ: ಆಸ್ತಿ, ಅಂತಸ್ತು ನೋಡಿ ಜೈಲಿನಲ್ಲಿ ಸೌಕರ್ಯ ನೀಡಲು ಸಾಧ್ಯವಿಲ್ಲ: ದರ್ಶನ್‌ಗೆ ಜೈಲೂಟ ಫಿಕ್ಸ್‌ – ಕೋರ್ಟ್‌ ಹೇಳಿದ್ದೇನು?

 

ದೇವಸ್ಥಾನದಲ್ಲಿ ಗುರುವಾರ ಬೆಳಗ್ಗೆ ದರ್ಶನ್‌ ಬಿಡುಗಡೆ ಸಂಬಂಧ ನವ ಚಂಡಿಕಾ ಹೋಮ (Nava Chandika Homa) ನಡೆಯಲಿದೆ. ಮುಂಜಾನೆ ಯಾಗಶಾಲೆಯಲ್ಲಿ ಚಂಡಿಕಾಹೋಮ ನಡೆಯಲಿದ್ದು ದರ್ಶನ್ ಬಂಧಮುಕ್ತಿಗಾಗಿ ವಿಜಯಲಕ್ಷ್ಮಿ ಪ್ರಾರ್ಥನೆ ಮಾಡಲಿದ್ದಾರೆ.

Share This Article