ವಿಶ್ವವಿಖ್ಯಾತ ದಸರಾ ಮಹೋತ್ಸವ – ಇಂದು ಗಜ ಪಯಣ ಆರಂಭ

Public TV
1 Min Read

ಮೈಸೂರು: ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ದಿನಗಣನೆ ಪ್ರಾರಂಭವಾಗಿದ್ದು, ಇಂದು ಗಜ ಪಯಣ ಆರಂಭವಾಗಿದೆ.

ಕಾಡಿನಿಂದ ನಾಡಿಗೆ ಆನೆಗಳು ಹೊರಡಲಿವೆ. ನಾಡಹಬ್ಬದ ಮೊದಲ ಅಧಿಕೃತ ಕಾರ್ಯಕ್ರಮ ಇಂದು ಪ್ರಾರಂಭವಾಗಲಿದ್ದು, ಅಭಿಮನ್ಯು ನೇತೃತ್ವದಲ್ಲಿ ಗಜಪಡೆ ಮೈಸೂರಿಗೆ ಕಾಲಿಡಲಿದೆ. 57 ವರ್ಷದ ಅಭಿಮನ್ಯು, 22 ವರ್ಷದ ಭೀಮ, 38 ವರ್ಷದ ಮಹೇಂದ್ರ ಹಾಗೂ 39 ವರ್ಷದ ಗೋಪಲಸ್ವಾಮಿ, 63 ವರ್ಷದ ಅರ್ಜುನ, 59 ವರ್ಷದ ವಿಕ್ರಮ, 44 ವರ್ಷದ ಧನಂಜಯ, 45 ವರ್ಷದ ಕಾವೇರಿ, 41 ವರ್ಷದ ಗೋಪಿ. ಇದನ್ನೂ ಓದಿ: ಫ್ಲ್ಯಾಶ್‌ಲೈಟ್‌ನಲ್ಲಿ ಇಸಿಜಿ ಟೆಸ್ಟ್ ಮಾಡಿದ ಸರ್ಕಾರಿ ಆಸ್ಪತ್ರೆ ವೈದ್ಯರು 

40 ವರ್ಷದ ಶ್ರೀರಾಮ ಹಾಗೂ 63 ವರ್ಷದ ವಿಜಯಾ, 49 ವರ್ಷದ ಚೈತ್ರಾ, 21 ವರ್ಷದ ಲಕ್ಷ್ಮಿ ಹಾಗೂ 18 ವರ್ಷದ ಪಾರ್ಥಸಾರಥಿ ಆನೆಗಳು ಆಗಮನವಾಗಲಿದೆ.

ಇಂದು ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ವೀರಹೊಸಹಳ್ಳಿಯಿಂದ ಗಜಪಯಣ ಆರಂಭವಾಗಲಿದೆ. ಜನಪ್ರತಿನಿಧಿಗಳು ಗಜಪಯಣಕ್ಕೆ ಸ್ವಾಗತ ಕೋರಲಿದ್ದಾರೆ. 9 ಆನೆಗಳು ಮೊದಲ ತಂಡದಲ್ಲಿ ಬರಲಿದ್ದು, 2ನೇ ತಂಡದಲ್ಲಿ 5 ಆನೆಗಳು ಬರಲಿವೆ. ಜಂಬೂ ಸವಾರಿಯಲ್ಲಿ ಒಟ್ಟು 14 ಆನೆಗಳು ಭಾಗಿಯಾಗಲಿದ್ದು, ಸ್ಟ್ಯಾಂಡ್ ಬೈ ರೂಪದಲ್ಲಿ ಇರಿಸಿ ಕೊಳ್ಳಲು 3 ಆನೆಗಳನ್ನು ಹೆಚ್ಚುವರಿಯಾಗಿ ನಾಡಿಗೆ ಕರೆಸಿ ಕೊಳ್ಳಲಾಗುತ್ತಿದೆ. ಇದನ್ನೂ ಓದಿ:  ಮನಬಂದಂತೆ ಗುಂಡಿನ ದಾಳಿ- ಕಿರಾತಕನ ಗುಂಡೇಟಿಗೆ ನಾಲ್ವರು ಬಲಿ, ಆರೋಪಿ ಪರಾರಿ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *