ಬಿಳಿಗಿರಿರಂಗನ ಬೆಟ್ಟದಲ್ಲಿ ದಾಸೋಹ ಪುನಾರಂಭ

1 Min Read

ಚಾಮರಾಜನಗರ: ಗ್ಯಾಸ್ ಅಭಾವದ ಹಿನ್ನೆಲೆ ಸ್ಥಗಿತಗೊಂಡಿದ್ದ ಬಿಳಿಗಿರಿರಂಗನ ಬೆಟ್ಟದಲ್ಲಿ (Biligiriranga Hills) ದಾಸೋಹ ಪುನಾರಂಭಗೊಂಡಿದೆ.

ಗ್ಯಾಸ್ ಸಿಲಿಂಡರ್ ಕೊರತೆ ಕಾರಣದಿಂದ ಒಂದು ದಿನದ ಮಟ್ಟಿಗೆ ದಾಸೋಹ ಸ್ಥಗಿತಗೊಂಡಿತ್ತು. ಸಮಸ್ಯೆಗೆ ಗ್ಯಾಸ್ ಏಜೆನ್ಸಿಗಳು ಸ್ಪಂದಿಸಿದ್ದರಿಂದ, ದೇವಾಲಯಕ್ಕೆ ಅಗತ್ಯ ಗ್ಯಾಸ್ ಸಿಲಿಂಡರ್‌ಗಳ ಪೂರೈಕೆಯಾಗಿದೆ. ಬಿಳಿಗಿರಿರಂಗನ ಸನ್ನಿಧಿಯಲ್ಲಿ ದಾಸೋಹ ಮತ್ತೆ ಪುನರಾರಂಭಗೊಂಡಿದೆ. ಇದನ್ನೂ ಓದಿ: ಶಾಲೆ ಬಿಸಿಯೂಟಕ್ಕೂ ತಟ್ಟಿದ ಗ್ಯಾಸ್‌ ಅಭಾವದ ಬಿಸಿ – ಸೌದೆ ಒಲೆಯಲ್ಲೇ ಅಡುಗೆ ಮಾಡಿದ ಸಿಬ್ಬಂದಿ

ಫೆಬ್ರವರಿ 28 ರಂದು ಅಮೆರಿಕ ಮತ್ತು ಇಸ್ರೇಲ್, ಇರಾನ್ ಮೇಲೆ ಮಿಲಿಟರಿ ದಾಳಿ ನಡೆಸಿದವು. ದಾಳಿಯ ಮೊದಲ ದಿನವೇ ಇರಾನ್ ಸುಪ್ರೀಂ ನಾಯಕ ಅಲಿ ಖಮೇನಿ ಹತ್ಯೆಯಾಯಿತು. ಈ ದಾಳಿಯಿಂದ ಪಶ್ಚಿಮ ಏಷ್ಯಾದಲ್ಲಿ ಸಂಘರ್ಷ ತೀವ್ರಗೊಂಡಿದೆ. ಪ್ರತೀಕಾರವಾಗಿ ಇರಾನ್, ಅಮೆರಿಕದ ಮಿಲಿಟರಿ ನೆಲೆಗಳನ್ನು ಹೊಂದಿರುವ ಹಲವಾರು ಗಲ್ಫ್ ರಾಷ್ಟ್ರಗಳ ಮೇಲೆ ದಾಳಿ ಮಾಡುತ್ತಿದೆ.

ಸಂಘರ್ಷದಿಂದ ಪ್ರಮುಖ ಜಾಗತಿಕ ಇಂಧನ ಕಾರಿಡಾರ್ ಆಗಿರುವ ಹಾರ್ಮುಜ್ ಜಲಸಂಧಿಯ ಮೂಲಕ ಸಾಗಣೆಯನ್ನು ಅಡ್ಡಿಪಡಿಸಿದೆ. ಇದು ಅಂತರರಾಷ್ಟ್ರೀಯ ತೈಲ ಸರಬರಾಜು, ಇಂಧನ ಮಾರುಕಟ್ಟೆಗಳು ಮತ್ತು ಜಾಗತಿಕ ಆರ್ಥಿಕ ಸ್ಥಿರತೆಯ ಮೇಲೆ ಪರಿಣಾಮ ಬೀರಿದೆ. ಇದರಿಂದ ಅಗತ್ಯ ಪ್ರಮಾಣದ ಎಲ್‌ಪಿಜಿ ಭಾರತಕ್ಕೆ ಆಮದಾಗದೇ ಅಭಾವ ಸೃಷ್ಟಿಯಾಗಿದೆ. ಇದನ್ನೂ ಓದಿ: ಹೋಟೆಲ್‌ಗಳಿಗೆ ಸದ್ಯಕ್ಕೆ ಗ್ಯಾಸ್ ಪೂರೈಕೆ ಇಲ್ಲ – ಹೋಟೆಲ್ ಉದ್ಯಮಕ್ಕೆ ಮತ್ತೆ ಸರ್ಕಾರ ಶಾಕ್

Share This Article