ಅಪಘಾತದಲ್ಲಿ ತಂದೆ ಮುಂದೇ ಪ್ರಾಣಬಿಟ್ಟ ಮಗಳು- ಬಸ್ ಚಾಲಕನ ಬಂಧನ

Public TV
1 Min Read

ಬೆಂಗಳೂರು: ವಿದ್ಯಾರ್ಥಿನಿಯ ಮೇಲೆ ಬಸ್ ಚಲಾಯಿಸಿದ ಪ್ರಕರಣದಲ್ಲಿ ಹಿಟ್ ಆಂಡ್ ರನ್ ಮಾಡಿ ಪರಾರಿಯಾಗಿದ್ದ ಬಸ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಶಾಂತ್ ಬಂಧಿತ ಆರೋಪಿ. ಎಸ್‍ಆರ್ ಎಸ್ ಬಸ್ ಚಾಲಕನಾಗಿರೋ ಪ್ರಶಾಂತ್ ಮಂಗಳವಾರ ರಾತ್ರಿ ವೆಸ್ಟ್ ಆಫ್ ಕಾರ್ಡ್ ರಸ್ತೆಯ ವಿನಾಯಕ ದೇವಸ್ಥಾನ ಬಳಿ ಕಾವೇರಿ ಕಾಲೇಜಿನ ಅಂತಿಮ ವರ್ಷದ ಬಿಕಾಂ ಓದುತ್ತಿದ್ದ ಚೈತ್ರಾ ಮೇಲೆ ಮೇಲೆ ಬಸ್ ಹತ್ತಿಸಿದ್ದನು.

ಮೃತ ಚೈತ್ರಾ ರಾಜಾಜಿನಗರದಲ್ಲಿ ತನ್ನ ಕಾಲೇಜು ಶಿಕ್ಷಕಿಯ ಮದುವೆಗೆ ತನ್ನ ತಂದೆ ಜೊತೆ ಬೈಕಿನಲ್ಲಿ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿತ್ತು. ಪ್ರಕರಣ ಸಂಬಂಧ ಮಲ್ಲೇಶ್ವರಂ ಪೊಲೀಸರು ಆರೋಪಿಯ ಹುಡುಕಾಟದಲ್ಲಿ ತೊಡಗಿದ್ದರು. ಮಲ್ಲೇಶ್ವರಂ ಇನ್ಸ್ ಪೆಕ್ಟರ್ ಅಂಜುಮಾಲಾ ಪ್ರಕರಣವನ್ನು ಕೈಗೆತ್ತಿಕೊಂಡು ಸದ್ಯ ಆರೋಪಿಯನ್ನ ಬಂಧಿಸಿದ್ದಾರೆ.

ಚೈತ್ರಾ ಬೈಕ್‍ನ ಹಿಂಬದಿಯಲ್ಲಿ ಕುಳಿತಿದ್ದರು. ಈ ವೇಳೆ ಖಾಸಗಿ ಬಸ್ ಬೈಕಿಗೆ ಡಿಕ್ಕಿ ಹೊಡೆದಿತ್ತು. ಘಟನೆ ಬಳಿಕ ತೀವ್ರ ರಕ್ತಸ್ರಾವದಿಂದ ಚೈತ್ರಾ ಸ್ಥಳದಲ್ಲೇ ಸಾವನ್ನಪ್ಪಿದ್ದರು. ತೀವ್ರವಾಗಿ ಗಾಯಗೊಂಡಿರುವ ಚೈತ್ರಾ ತಂದೆಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Share This Article
Leave a Comment

Leave a Reply

Your email address will not be published. Required fields are marked *