ಹಂಸಲೇಖ ಅನಾರೋಗ್ಯದ ಬಗ್ಗೆ ಮಗಳು ತೇಜಸ್ವಿನಿ ಹಂಸಲೇಖ ಸ್ಪಷ್ಟನೆ

Public TV
1 Min Read

ನ್ನಡದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ (Hamsalekha) ಅವರು ಎದೆನೋವಿನ (Chest Pain) ತೊಂದರೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿತ್ತು. ಈ ಕುರಿತು ಅನೇಕರು ಆತಂಕ ವ್ಯಕ್ತ ಪಡಿಸಿದ್ದರು. ಅಲ್ಲದೇ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಹಂಸಲೇಖ ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸಿದ್ದರು. ಹಂಸಲೇಖ ಅವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಹಾರೈಸಿದ್ದರು. ಹಾಗಾಗಿ ಸಹಜವಾಗಿಯೇ ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿತ್ತು.

ಹಂಸಲೇಖ ಅವರು ಬೆಂಗಳೂರಿನ ಆಸ್ಪತ್ರೆಗೆ (Hospital) ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನುವ ಸುದ್ದಿ ಕಾಳ್ಗಿಚ್ಚಿನಂತೆ ಹರಡಿದ್ದರಿಂದ ಹಂಸಲೇಖ ಅವರ ಆರೋಗ್ಯದ ಕುರಿತು ತಿಳಿದುಕೊಳ್ಳಲು ಅಭಿಮಾನಿಗಳು ಕೂಡ ಆಸ್ಪತ್ರೆಯತ್ತ ಹೆಜ್ಜೆ ಹಾಕಿದ್ದರು. ಈ ಕುರಿತು ಹಂಸಲೇಖ ಅವರ ಪುತ್ರಿ ತೇಜಸ್ವಿನಿ ಪ್ರತಿಕ್ರಿಯೆ ನೀಡಿದ್ದಾರೆ. ತಂದೆಯವರ ಆರೋಗ್ಯದ ಬಗ್ಗೆ ಅಪ್ ಡೇಟ್ ನೀಡಿದ್ದಾರೆ. ಇದನ್ನೂ ಓದಿ:ಪನೋರಮಾ ಸ್ಟುಡಿಯೋ ತೆಕ್ಕೆಗೆ ಝೈದ್ ಖಾನ್ ನಟನೆಯ ‘ಬನಾರಸ್’ ಸಿನಿಮಾ

ಇಂದು ಮುಂಜಾನೆಯಿಂದ ನಮ್ಮ ತಂದೆ, ಡಾ. ಹಂಸಲೇಖಾರವರ ಆರೋಗ್ಯದ ಬಗ್ಗೆ ಹಾಗೂ ಅವರು ಆಸ್ಪತ್ರೆಯಲ್ಲಿ ದಾಖಲಾಗಿರುವುದಾಗಿ ಒಂದು ವದಂತಿ ವಾರ್ತಾ ಮಾದ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಕಂಡುಬಂದಿದೆ. ಈ ವದಂತಿಯು ಸುಳ್ಳಾಗಿದ್ದು, ಇದರಿಂದ ಅಭಿಮಾನಿಗಳು ಆತಂಕ ಪಡಬಾರದು ಹಾಗೂ ಈ ವದಂತಿಯನ್ನು ಇನ್ನು ಹರಡದಂತೆ ನೋಡಿಕೊಳ್ಳಬೇಕು ಎಂದು ನಮ್ರತೆಯಿಂದ ಕೇಳಿಕೊಳ್ಳುತೇವೆ ಎಂದು ತೇಜಸ್ವಿನಿ ಹಂಸಲೇಖ (Tejaswini Hamsalekha) ಪ್ರತಿಕ್ರಿಯೆ ನೀಡಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *