ಡಿಸಿಎಂ ಸವದಿ ಹಾದಿ ಸುಗಮ

Public TV
1 Min Read

ಬೆಂಗಳೂರು: ವಿಧಾನ ಪರಿಷತ್ ಸ್ಥಾನಕ್ಕೆ ಸ್ಪರ್ಧಿಸಿದ ಡಿಸಿಎಂ ಲಕ್ಷ್ಮಣ ಸವದಿ ಹಾದಿಗೆ ಎದುರಾಗಿದ್ದ ಸಂಕಷ್ಟ ದೂರವಾಗಿದೆ. ಸವದಿಗೆ ಎದುರಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದಾರೆ. ಆದರೆ ಜೆಡಿಎಸ್ ಜೊತೆ ಸೇರಿ ವಿಧಾನ ಪರಿಷತ್ ಗೆ ಅಭ್ಯರ್ಥಿ ಹಾಕುವ ನಿರ್ಧಾರದಿಂದ ಕಾಂಗ್ರೆಸ್ ಹಿಂದಕ್ಕೆ ಸರಿದಿದೆ.

ಸೂಕ್ತ ಸಂಖ್ಯಾಬಲ ಇಲ್ಲದ ಕಾರಣಕ್ಕೆ ಸ್ಪರ್ಧೆ ಮಾಡಿ ಮುಖಭಂಗ ಮಾಡಿಕೊಳ್ಳೋದು ಬೇಡ ಎಂದು ಕಾಂಗ್ರೆಸ್ ಹೈ ಕಮಾಂಡ್ ಸ್ಪರ್ಧೆಗೆ ಗ್ರೀನ್ ಸಿಗ್ನಲ್ ತೋರಿದೆ. ಆ ಮೂಲಕ ಜೆಡಿಎಸ್ ಜೊತೆ ಸೇರಿ ವಿಧಾನ ಪರಿಷತ್ ನ ಒಂದು ಸ್ಥಾನಕ್ಕೆ ಸ್ಪರ್ಧೆ ಮಾಡುವ ನಿರ್ಧಾರದಿಂದ ಕಾಂಗ್ರೆಸ್ ಹಿಂದೆ ಸರಿದಿದೆ. ಆ ಮೂಲಕ ಕಾಂಗ್ರೆಸ್ ಜೆಡಿಎಸ್ ಮೈತ್ತಿ ಅಗತ್ಯವಿಲ್ಲ ಎಂದು ರಾಜ್ಯ ಕೈ ನಾಯಕರಿಗೆ ಸ್ಪಷ್ಟವಾಗಿ ಸೂಚಿಸಿದೆ ಎಂದು ತಿಳಿದು ಬಂದಿದೆ.

ಈ ಬೆಳವಣಿಗೆಯಿಂದ ವಿಧಾನ ಪರಿಷತ್ ಗೆ ಬಿಜೆಪಿ ಅಭ್ಯರ್ಥಿಯಾಗಿರುವ ಡಿಸಿಎಂ ಲಕ್ಷ್ಮಣ ಸವದಿಗೆ ಎದುರಾಗಿದ್ದ ಅಡ್ಡಿ ನಿವಾರಣೆಯಾಗಿದೆ. ಕಾಂಗ್ರೆಸ್ ಬೆಂಬಲ ಇಲ್ಲದೆ ಜೆಡಿಎಸ್ ಸಹಾ ಫೈಟ್ ಕೊಡಲು ಸಾಧ್ಯವಿಲ್ಲ. ಆದ್ದರಿಂದ ಜೆಡಿಎಸ್ ಕೈ ಚಾಚಿದ ಮೈತ್ರಿ ಪ್ರಪೋಸಲ್ ಗೆ ಕಾಂಗ್ರೆಸ್ ಒಪ್ಪದೇ ಹಿಂದೆ ಸರಿದಿದೆ. ಡಿಸಿಎಂ ಲಕ್ಷ್ಮಣ ಸವದಿ ವಿಧಾನ ಪರಿಷತ್ ಹಾದಿ ಸುಗಮವಾಗಿದ್ದು ಡಿಸಿಎಂ ಸ್ಥಾನವು ಭದ್ರವಾದಂತಾಗಿದೆ.

Share This Article
Leave a Comment

Leave a Reply

Your email address will not be published. Required fields are marked *