100ಕ್ಕೂ ಹೆಚ್ಚು ಪ್ರಕರಣಗಳ ಪತ್ತೆ – ಪೊಲೀಸ್ ಸಿಬ್ಬಂದಿಗೆ ಡಿಸಿಪಿ ಚನ್ನಣ್ಣನವರಿಂದ ಪ್ರವಾಸ, 1ಲಕ್ಷ ನಗದು, ಬೈಕ್ ನೀಡಿ ಗೌರವ

Public TV
1 Min Read

ಬೆಂಗಳೂರು: ಸುಮಾರು ನೂರಕ್ಕೂ ಹೆಚ್ಚು ಪ್ರಕರಣಗಳನ್ನು ಪತ್ತೆ ಮಾಡಿದ ಪೊಲೀಸ್ ಸಿಬ್ಬಂದಿಗೆ ಡಿಸಿಪಿ ರವಿ ಡಿ ಚನ್ನಣ್ಣನವರ್ ಅವರು ವಿಶೇಷ ಬಹುಮಾನ ನೀಡಿ ಗೌರವಿಸಿದ್ದಾರೆ.

ಪೊಲೀಸ್ ಸಿಬ್ಬಂದಿ ಶ್ರೀ.ಚಂದ್ರಕುಮಾರ್ ಅವರಿಗೆ ಈ ಬಹುಮಾನ ನೀಡಿ ಗೌರವಿಸಲಾಗಿದೆ. ಪೊಲೀಸ್ ಸಿಬ್ಬಂದಿಗಳ ಕರ್ತವ್ಯವನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸಬೇಕು. ಆದ್ದರಿಂದ ಅಂತಹ ಸಿಬ್ಬಂದಿಗಳಿಗೆ ಬಹುಮಾನ ನೀಡಿ ಗೌರವಿಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಚಂದ್ರಕುಮಾರ್ ಅವರು ನಗರದ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಇವರು ಸರಗಳ್ಳನನ್ನು ಹಿಡಿದು ನೂರಕ್ಕೂ ಹೆಚ್ಚು ಪ್ರಕರಣಗಳನ್ನು ಪತ್ತೆ ಮಾಡಿದ್ದಾರೆ. ಶ್ರೀ.ಚಂದ್ರಕುಮಾರ್ ಅವರ ಈ ಅತ್ಯುತ್ತಮ ಕರ್ತವ್ಯವನ್ನು ಗುರುತಿಸಿ ಒಂದು ಲಕ್ಷ ನಗದು ಬಹುಮಾನ, ಒಂದು ಪಲ್ಸರ್ ಬೈಕ್ ಮತ್ತು ರಜೆಯೊಂದಿಗೆ ಕುಟುಂಬ ಸಮೇತ ಪ್ರವಾಸ ಆಯೋಜಿಸುವುದರ ಮೂಲಕ ಗೌರವಿಸಲಾಗಿದೆ.

ಚಂದ್ರಕುಮಾರ್ ಅವರಿಗೆ ಡಿಸಿಪಿ ರವಿ ಡಿ ಚನ್ನಣ್ಣನವರ್ ಬಹುಮಾನ ನೀಡಿ ಗೌರವಿಸಿದ್ದಾರೆ. ಈ ವಿಚಾರವನ್ನು ಸ್ವತಃ ಚನ್ನಣ್ಣನವರೇ ತಮ್ಮ ಟ್ಟಿಟ್ಟರ್ ನಲ್ಲಿ ಸನ್ಮಾನ ಮಾಡಿದ ಫೋಟೋ ಹಾಗೂ ಬೈಕಿನ ಫೋಟೋವನ್ನು ಪೋಸ್ಟ್ ಮಾಡಿ ಅಭಿನಂದಿಸಿದ್ದಾರೆ. ಈ ಮೂಲಕ ಚಂದ್ರಕುಮಾರ್ ಅವರು ಇತರರಿಗೆ ಮಾದರಿಯಾಗಿದ್ದಾರೆ.

Share This Article
1 Comment

Leave a Reply

Your email address will not be published. Required fields are marked *