ದೀಪಿಕಾ ಪಡುಕೋಣೆ ಬಾಳಲ್ಲಿ ಹೊಸ ವ್ಯಕ್ತಿಯ ಪ್ರವೇಶ!

Public TV
1 Min Read

ಮುಂಬೈ: ಬಾಲಿವುಡ್ ಡಿಂಪಲ್ ಬೆಡಗಿ ದೀಪಿಕಾ ಪಡುಕೋಣೆ ಅಭಿನಯದ ಪದ್ಮಾವತ್ ಸಿನಿಮಾ ಬಿಡುಗಡೆಯಾಗಿದ್ದು, ದೇಶಾದ್ಯಂತ ಮಿಶ್ರ ಪ್ರತಿಕ್ರಿಯೆ ಬಂದಿದೆ. ಹೀಗಿರುವಾಗ ದೀಪಿಕಾ ಬಾಳಲ್ಲಿ ಒಬ್ಬ ವ್ಯಕ್ತಿಯ ಪ್ರವೇಶವಾಗಿದೆ. ಅದು ಬೇರೆ ಯಾರೂ ಅಲ್ಲ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ.

ಪದ್ಮಾವತ್ ಚಿತ್ರ ಬಿಡುಗಡೆಯಾಗುತ್ತಿದ್ದಂತೆ, ದೀಪಿಕಾ ಸಂಜಯ್ ಲೀಲಾ ಜೊತೆವಿರುವ ಫೋಟೋವನ್ನು ತಮ್ಮ ಇನ್ ಸ್ಟಾಗ್ರಾಂನಲ್ಲಿ ಹಾಕಿ ಅದಕ್ಕೆ “ನನ್ನ ಜೀವನದ ಈಗೀನ ಹಾಗೂ ಮುಂದಿನ ಜೀವನದ್ದಕ್ಕೂ ಇವರು ನನ್ನ ಮುಖ್ಯ ವ್ಯಕ್ತಿ ಆಗಿರುತ್ತಾರೆ. ನಮ್ಮಿಬ್ಬರ ಕಡೆಯಿಂದ ನಾವು ನಿಮ್ಮನ್ನು ಪ್ರೀತಿಸುತ್ತೇನೆ ಎಂದು ಹೇಳಲು ಇಷ್ಟಪಡುತ್ತೇನೆ. ನಿಮ್ಮನ್ನು ಚಿತ್ರಮಂದಿರಗಳಲ್ಲಿ ಭೇಟಿ ಮಾಡುತ್ತೇನೆ” ಎಂದು ಪದ್ಮಾವತ್ ಕ್ಯಾಪ್ಷನ್ ಹಾಕಿ ಪೋಸ್ಟ್ ಮಾಡಿದ್ದಾರೆ.

ಒಂದು ನಟಿಯನ್ನು ತೆರೆಯ ಮೇಲೆ ಅದ್ಭುತವಾಗಿ ಕಾಣಿಸಿಕೊಳ್ಳುವಂತೆ ಮಾಡಿದ ನಿರ್ದೇಶಕನಿಗೆ ನನ್ನ ಕೃತಜ್ಞತೆಗಳು. ಬಾಜಿರಾವ್ ಮಸ್ತಾನಿನಂತಹ ಬ್ಲಾಕ್ ಬಸ್ಟರ್ ಚಿತ್ರದ ನಂತರ ಮತ್ತೆ ನನ್ನನ್ನು ರಾಣಿಯಾಗಿ ಪದ್ಮಾವತ್ ಚಿತ್ರದಲ್ಲಿ ಕಾಣಿಸಿಕೊಳ್ಳುವಂತೆ ಮಾಡಿದ್ದಾರೆ ಎಂದು ದೀಪಿಕಾ ತಿಳಿಸಿದ್ದಾರೆ.

ಪದ್ಮಾವತಿ ಚಿತ್ರ ಸಾಕಷ್ಟು ಸಮಸ್ಯೆಗಳನ್ನು ಎದುರಿಸಿ ಪದ್ಮಾವತ್ ಆಗಿ ಬದಲಾಗಿದ್ದು, ಯು/ಎ ಸರ್ಟಿಫಿಕೆಟ್ ದೊರೆತಿತ್ತು. ಈ ಚಿತ್ರದಲ್ಲಿ ನಟಿ ದೀಪಿಕಾ ಪಡುಕೋಣೆ ರಾಣಿ ಪದ್ಮಾವತ್ ಆಗಿ ಕಾಣಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಚಿತ್ರದಲ್ಲಿ ಇಬ್ಬರು ನಾಯಕರಿದ್ದು, ಶಾಹಿದ್ ಕಪೂರ್ ರಾಣಾ ರತನ್ ಸಿಂಗ್ ಆಗಿ ಕಾಣಿಸಿಕೊಂಡಿದ್ದಾರೆ. ಮತ್ತೊಬ್ಬ ನಟ ರಣ್‍ವೀರ್ ಸಿಂಗ್ ಅಲ್ಲಾವುದ್ದೀನ್ ಖಿಲ್ಜಿ ಆಗಿ ಬಣ್ಣ ಹಚ್ಚಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *