ಸಿಎಂ ವಿರುದ್ಧ ಮಾನನಷ್ಟ ಕೇಸ್ ದಾಖಲು

Public TV
1 Min Read

ಬೆಂಗಳೂರು: ಎನ್ ಆರ್ ರಮೇಶ್ ಒಬ್ಬ ಮನೆಹಾಳ ಎಂದು ಸಿಎಂ ನಿಂದಿಸಿದ್ದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಗರದ 3ನೇ ಎಸಿಎಂಎಂ ನ್ಯಾಯಾಲಯದಲ್ಲಿ ಮಾನನಷ್ಟ  ಪ್ರಕರಣ ದಾಖಲಾಗಿದೆ.

ಬೆಂಗಳೂರು ನಗರದ ಬಿಜೆಪಿ ವಕ್ತಾರ ಎನ್ ಆರ್ ರಮೇಶ್ ಅವರು ಸಿಎಂ ವಿರುದ್ಧ ಮಾನನಷ್ಟ  ಕೇಸ್ ದಾಖಲು ಮಾಡಿದ್ದಾರೆ.

ಮುಖ್ಯಮಂತ್ರಿ ಸ್ಥಾನದ ಘನತೆಯನ್ನು ಮರೆತು, ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ನನ್ನನ್ನು ಒಬ್ಬ ಮನೆಹಾಳ ಎಂದು ಅವಾಚ್ಯವಾಗಿ ನಿಂದಿಸಿದ್ದರು. ಹೀಗಾಗಿ ಅಸಂವಿಧಾನಿಕ ಪದಗಳನ್ನು ಆಡಿದ್ದ ಬಗ್ಗೆ ಮಾಧ್ಯಮಗಳಲ್ಲಿ ಬಂದ ಸುದ್ದಿಯ ಅನ್ವಯದಲ್ಲಿ ನಗರದ 3ನೇ ಎಸಿಎಂಎಂ ನ್ಯಾಯಾಲಯದಲ್ಲಿ ಐಪಿಸಿ ಸೆಕ್ಷನ್ 499 ಮತ್ತು 500 ರ ಅಡಿಯಲ್ಲಿ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಎನ್.ಆರ್ ರಮೇಶ್ ಹೇಳಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *