ವಿಂಗ್ ಕಮಾಂಡರ್ ಅಭಿನಂದನ್‍ರನ್ನ ಭೇಟಿ ಮಾಡಿದ ರಕ್ಷಣಾ ಸಚಿವೆ

Public TV
1 Min Read

ನವದೆಹಲಿ: ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ವಿಂಗ್ ಕಮಾಂಡರ್ ಅಭಿನಂದನ್‍ರನ್ನು ಭೇಟಿ ಮಾಡಿದರು.

ತನ್ನ ಧೈರ್ಯ ಹಾಗೂ ಘನತೆಯಿಂದ ಭಾರತೀಯರ ಮನಗೆದ್ದ ಅಭಿನಂದನ್ ಅವರು ವಾಯುಪಡೆಯ ಕೇಂದ್ರದಲ್ಲಿ ವೈದ್ಯಕೀಯ ಸೇವೆ ಸಂದರ್ಭದಲ್ಲಿ ಭೇಟಿ ಮಾಡಿದ್ದರು. ಈ ವೇಳೆ ಶತ್ರು ರಾಷ್ಟ್ರದಲ್ಲಿದ್ದ 60 ಗಂಟೆಗಳ ಅವಧಿಯಲ್ಲಿ ನಡೆದ ಘಟನೆಗಳ ಬಗ್ಗೆ ಮಾಹಿತಿ ನೀಡಿದರು ಎನ್ನಲಾಗಿದೆ.

ಇದೇ ವೇಳೆ ದೇಶದ ಜನತೆ ನಿಮ್ಮನ್ನ ಕಂಡು ಹೆಮ್ಮೆ ಪಡುತ್ತಿದೆ ಎಂದು ಸಚಿವರು ಅಭಿನಂದನ್ ಅವರಿಗೆ ತಿಳಿಸಿದ್ದಾರೆ. ಇಬ್ಬರ ನಡುವಿನ ಭೇಟಿ ಸಂದರ್ಭದ ಫೋಟೋದಲ್ಲಿ ಅಭಿನಂದನ್ ಹಾಗೂ ಸಚಿವೆ ಮಾತುಕತೆ ನಡೆಸುತ್ತಿರುವುದನ್ನು ಕಾಣಬಹುದಾಗಿದೆ.

ಶುಕ್ರವಾರ ರಾತ್ರಿ ಪಾಕ್ ಸೈನಿಕರು ಭಾರತಕ್ಕೆ ಹಸ್ತಾಂತರಿಸಿದ ಬಳಿಕ ಅಭಿನಂದನ್ ರಾತ್ರಿ ಸುಮಾರು 11.30ರ ವೇಳೆಗೆ ದೆಹಲಿಗೆ ಆಗಮಿಸಿದ್ದರು. ಅಲ್ಲದೇ ತಮ್ಮ ಪೋಷಕರನ್ನು ಭೇಟಿಯಾಗಿದ್ದರು. ಈ ವೇಳೆ ನಾನು ಆರಾಮವಾಗಿದ್ದೇನೆ. ನನ್ನ ಆರೋಗ್ಯ ಚೆನ್ನಾಗಿದೆ ಎಂದು ತಿಳಿಸಿದ್ದರು. ಅಲ್ಲದೆ ಇದೇ ವೇಳೆ ಮತ್ತೆ ನಾನು ವಾಯುಸೇನೆಯ ಕರ್ತವ್ಯಕ್ಕೆ ಹಾಜರಾಗುತ್ತೇನೆ ಎಂಬ ಭರವಸೆ ನೀಡಿದ್ದರು ಎಂದು ವರದಿಯಾಗಿತ್ತು.

ಈ ವೇಳೆ ಅವರಿಗೆ ವಿವಿಧ ಹಂತಗಳಲ್ಲಿ ವೈದ್ಯಕೀಯ ಪರೀಕ್ಷೆಯನ್ನು ನಡೆಸಲಾಗಿತ್ತು. ಪಾಕಿಸ್ತಾನದ ವಾಯುದಾಳಿಯನ್ನು ಹಿಮ್ಮೆಟ್ಟುವ ವೇಳೆ ಗಡಿ ದಾಟಿ ಪಾಕ್ ಸೈನ್ಯದ ವಶದಲ್ಲಿದ್ದ ಅಭಿನಂದನ್ ಶುಕ್ರವಾರ ಸಂಜೆ ವೇಳೆಗೆ ಬಿಡುಗಡೆ ಮಾಡುತ್ತೇನೆ ಎಂದು ಹೇಳಿ ಮತ್ತೆ ತನ್ನ ಕುತಂತ್ರವನ್ನು ಪ್ರದರ್ಶಿಸಿತ್ತು. ನಿನ್ನೆ ಮುಂಜಾನೆಯಿಂದಲೇ ವಾಘಾ ಗಡಿಯಲ್ಲಿ ಕಾದು ಕುಳಿತಿದ್ದ ಭಾರತೀಯ ಅಭಿಮಾನಿಗಳ ಛಲ ರಾತ್ರಿಯಾದ್ರು ಕಡಿಮೆ ಆಗಲಿಲ್ಲ. ಸಂಜೆ ವೇಳೆಗೆ ಮಳೆ ಬಂದಿದ್ದರೂ ಕೂಡ ಲೆಕ್ಕಿಸದ ಭಾರತೀಯರು ಅಲ್ಲೇ ನಿಂತಿದ್ದರು. ಇವೆಲ್ಲದರ ನಡುವೆಯೇ ರಾತ್ರಿ 9.15 ಗಂಟೆ ವೇಳೆಗೆ ಅಭಿನಂದನ್ ಭಾರತದ ನೆಲವನ್ನು ಪ್ರವೇಶಿಸಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *