ಮಾಲಿನ್ಯ ತಡೆಗೆ ಕಠಿಣ ಕ್ರಮ ಕೈಗೊಂಡ ದೆಹಲಿ

Public TV
1 Min Read

ನವದೆಹಲಿ: ವಾಯು ಮಾಲಿನ್ಯವು ದೆಹಲಿಯಲ್ಲಿ ಮಿತಿ ಮಿರುತ್ತಿದ್ದ ಹಿನ್ನೆಲೆಯಲ್ಲಿ ಮಾಲಿನ್ಯ ತಡೆಗೆ ದೆಹಲಿ ಕಠಿಣ ಕ್ರಮ ಕೈಗೊಂಡಿದೆ.

ವಾಯುಮಾಲಿನ್ಯ ತಡೆಗೆ ಕಠಿಣ ಕ್ರಮ ಜರುಗಿಸಬೇಕು ಎಂದು ಸುಪ್ರೀಂಕೋರ್ಟ್ ನೀಡಿದ 1 ದಿನ ಗಡುವಿನ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರ ನೇತೃತ್ವದಲ್ಲಿ ನಡೆದ ದೆಹಲಿ ಸುತ್ತಮುತ್ತಲಿನ 4 ರಾಜ್ಯಗಳ ಸಭೆಯಲ್ಲಿ ಕೆಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ.

ದೆಹಲಿ, ರಾಜಸ್ತಾನ, ಹರಿಯಾಣ, ಉತ್ರರಪ್ರದೇಶ ಹಾಗೂ ಪಂಜಾಬ್ ರಾಜ್ಯಗಳ ಸಭೆ ನಡೆದಿದೆ. ಬಳಿಕ ತಡರಾತ್ರಿ ವಾಯು ಗುಣಮಟ್ಟ ಆಯೋಗವು ಮುಂದಿನ ಕೆಲವು ದಿನಗಳ ಮಟ್ಟಿಗೆ ಅನ್ವಯ ಆಗುವಂತೆ ಕೆಲವು ಕ್ರಮ ಪ್ರಕಟಿಸಿದೆ.


ಕೈಗೊಂಡ ನಿರ್ಣಯಗಳು:
* ದೆಹಲಿ ಹಾಗೂ ಸುತ್ತಮುತ್ತಲಿನ ವಲಯದಲ್ಲಿ ಮಾಲಿನ್ಯಕಾರಕ ಇಂಧನ ಬಳಕೆ ಉದ್ದಿಮೆಗಳು ಕಾರ್ಯ ನಿರ್ವಹಿಸಕೂಡದು
* 11 ಉಷ್ಣವಿದ್ಯುತ್ ಸ್ಥಾವರಗಳ ಪೈಕಿ 5 ಮಾತ್ರ ನವೆಂಬರ್ 30ರವರೆಗೆ ಕೆಲಸ ಮಾಡಬೇಕು. ಇದನ್ನೂ ಓದಿ: ದೆಹಲಿಯಲ್ಲಿ ಮಿತಿ ಮೀರಿದ ವಾಯು ಮಾಲಿನ್ಯ

* ನವೆಂಬರ್ 31ರವರೆಗೆ ಅಗತ್ಯವಸ್ತು ಸಾಗಾಣೆ ಟ್ರಕ್ ಹೊರತುಪಡಿಸಿ ಉಳಿದ ಟ್ರಕ್‍ಗಳ ಪ್ರವೇಶ ನಿಷೇಧ.
* 10 ವರ್ಷಕ್ಕಿಂತ ಹಳೆಯ ಪೆಡ್ರೋಲ್, 15 ವರ್ಷಕ್ಕಿಂತ ಹಳೆ ಡಿಸೇಲ್‍ವಾಹನ ನವೆಂಬರ್ 21ರವರೆಗೆ ಸಂಚಾರ ಮಾಡಬಾರದು.

* ನವೆಂಬರ್ 21ರವರೆಗೆ ವರ್ಕ್ ಫ್ರಂ ಹೋಮ್‍ಗೆ ಆದ್ಯತೆ. ಕಚೇರಿಗಳಲ್ಲಿ ಶೇ.50ರಷ್ಟು ಸಿಬ್ಬಂದಿಗೆ ಮಾತ್ರ ಅವಕಾಶವಿರುತ್ತದೆ.
* ಎಲ್ಲ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಮುಂದಿನ ಆದೇಶದವರೆಗೆ ರಜೆ ಇರುತ್ತದೆ.

Share This Article
Leave a Comment

Leave a Reply

Your email address will not be published. Required fields are marked *