ಭದ್ರತಾ ಲೋಪ – ದೆಹಲಿ ಕ್ಯಾಪಿಟಲ್ಸ್ ತಂಡದ ಬಸ್ ಮೇಲೆ ದಾಳಿ

Public TV
2 Min Read

ಮುಂಬೈ: ದೆಹಲಿ ಕ್ಯಾಪಿಟಲ್ಸ್ ತಂಡದ ಬಸ್ ಮೇಲೆ ದಾಳಿ ಮಾಡಿದ ಆರೋಪದ ಮೇಲೆ ದುಷ್ಕರ್ಮಿಗಳ ವಿರುದ್ಧ ಎಫ್‍ಐಆರ್ ದಾಖಲಿಸಿರುವುದಾಗಿ ಮುಂಬೈ ಪೊಲೀಸರು ಬುಧವಾರ ತಿಳಿಸಿದ್ದಾರೆ.

ಐಪಿಎಲ್ ಸೀಸನ್ 15 ಮಾರ್ಚ್ 26 ರಿಂದ ಆರಂಭವಾಗಲಿದೆ. ಎಲ್ಲಾ ತಂಡಗಳ ಸಿದ್ಧತೆಗಳು ಭರದಿಂದ ಸಾಗಿವೆ. ಈ ಬಾರಿ ಎಲ್ಲಾ ಪಂದ್ಯಗಳು ಮುಂಬೈ ಮತ್ತು ಪುಣೆಯಲ್ಲಿ ನಡೆಯಲಿವೆ. ಮುಂಬೈನ ಮೂರು ಸ್ಟೇಡಿಯಂಗಳಲ್ಲಿ ಅಂದರೆ ವಾಂಖೆಡೆ, ಬ್ರಾಬನ್ ಮತ್ತು ಡಿವೈ ಪಾಟೀಲ್‍ನಲ್ಲಿ ಪಂದ್ಯಗಳು ನಡೆಯಲಿವೆ. ಇದಕ್ಕಾಗಿ ಎಲ್ಲಾ ತಂಡಗಳ ಆಟಗಾರರು ಮುಂಬೈ ಕಡೆ ಪ್ರಯಾಣಿಸುತ್ತಿದ್ದಾರೆ. ಇದೆಲ್ಲದರ ನಡುವೆ ಆಟಗಾರರ ಭದ್ರತೆಯಲ್ಲಿ ಭಾರೀ ಲೋಪ ಕಂಡುಬಂದಿದೆ.

ಮಾರ್ಚ್ 16 ರಂದು, ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಕಾರ್ಯಕರ್ತರು ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯಗಳಿಗೆ ಆಟಗಾರರನ್ನು ಕರೆತರಲು 5-ಸ್ಟಾರ್ ಹೋಟೆಲ್‍ನ ಹೊರಗೆ ನಿಲ್ಲಿಸಿದ್ದ ಐಷಾರಾಮಿ ಬಸ್‍ನ ಗಾಜುಗಳನ್ನು ಒಡೆದು ದುಷ್ಕೃತ್ಯ ಮೆರೆದಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಯಡಿಯೂರಪ್ಪ, ಸಿಎಂ ಏನೇ ಮಾತಾಡಲಿ, ರಾಜ್ಯದಲ್ಲಿ ಜನ ಬದಲಾವಣೆ ಬಯಸಿದ್ದಾರೆ: ಡಿಕೆಶಿ

ದೆಹಲಿ ಕ್ಯಾಪಿಟಲ್ ಐಪಿಎಲ್ ತಂಡದ ನಿಂತಿದ್ದ ಬಸ್ ಮೇಲೆ ದಾಳಿ ನಡೆಸಿದ ಆರೋಪದಲ್ಲಿ ಐಪಿಸಿಯ 143, 147, 149, 427 ಸೆಕ್ಷನ್‍ಗಳ ಅಡಿಯಲ್ಲಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ. ಇದನ್ನೂ ಓದಿ: IPL 2022 – ಡೆಲ್ಲಿ ತಂಡ ಸೇರಿಕೊಂಡ ಶೇನ್ ವಾಟ್ಸನ್

ಮುಂಬೈನ ಕೊಲಾಬಾ ಪ್ರದೇಶದಲ್ಲಿರುವ ತಾಜ್ ಪ್ಯಾಲೇಸ್ ಎಂಬ ಹೋಟೆಲ್‍ನಲ್ಲಿ ದೆಹಲಿ ತಂಡ ತಂಗಿದೆ. ಪ್ರಸಿದ್ಧವಾದ ‘ಗೇಟ್‍ವೇ ಆಫ್ ಇಂಡಿಯಾ’ ಈ ಹೋಟೆಲ್‍ಗೆ ತುಂಬಾ ಹತ್ತಿರದಲ್ಲಿದ್ದು, ಇದು ವಾಂಖೆಡೆ ಸ್ಟೇಡಿಯಂಗೆ ಕೂಡ ಹತ್ತಿರದಲ್ಲಿದೆ.

ದೆಹಲಿ ಕ್ಯಾಪಿಟಲ್ಸ್ ಕಳೆದ ವಾರವಷ್ಟೇ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2022ಗಾಗಿ ತಮ್ಮ ಹೊಸ ಜೆರ್ಸಿಯನ್ನು ಅನಾವರಣಗೊಳಿಸಿತ್ತು. ಇದರಲ್ಲಿ ದೆಹಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್, ವೇಗದ ಬೌಲರ್ ಅನ್ರಿಚ್ ನಾಟ್ರ್ಜೆ ಮತ್ತು ಹೊಸ ಆಟಗಾರ ಡೇವಿಡ್ ವಾರ್ನರ್ ಹೊಸ ಜೆರ್ಸಿಯೊಂದಿಗೆ ಪೋಸ್ ನೀಡಿದ್ದರು.

Share This Article
Leave a Comment

Leave a Reply

Your email address will not be published. Required fields are marked *