ಬಿಜೆಪಿಯನ್ನು ಗೆಲ್ಲಿಸಿದ ರಾಹುಲ್‌ಗೆ ಅಭಿನಂದನೆಗಳು: ಕೆ.ಟಿ ರಾಮ್ ರಾವ್

Public TV
1 Min Read

ಹೈದರಾಬಾದ್: ಬಿಜೆಪಿಯನ್ನು (BJP) ಮತ್ತೊಮ್ಮೆ ಗೆಲ್ಲಿಸಿದ್ದಕ್ಕಾಗಿ ರಾಹುಲ್ ಗಾಂಧಿಯವರಿಗೆ (Rahul Gandhi) ಅಭಿನಂದನೆ ಸಲ್ಲಿಸುತ್ತೇನೆ ಎಂದು ಬಿಆರ್‌ಎಸ್‌ನ ಹಾಲಿ ರಾಜ್ಯಾಧ್ಯಕ್ಷ ಕೆ.ಟಿ ರಾಮ್ ರಾವ್ (KT Rama Rao) ವ್ಯಂಗ್ಯವಾಡಿದ್ದಾರೆ.


ತೆಲಂಗಾಣದಲ್ಲಿ ದೆಹಲಿ ಚುನಾವಣಾ (Delhi Election) ಫಲಿತಾಂಶದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದರು. ಅವರು ಬಿಜೆಪಿಯನ್ನು ಸೋಲಿಸುವಲ್ಲಿ ರಾಹುಲ್ ಗಾಂಧಿಯವರು ಅಸಮರ್ಥರು ಎಂದು ದೆಹಲಿ ಚುನಾವಣಾ ಫಲಿತಾಂಶವು ಸಾಬೀತು ಮಾಡಿದೆ. ಅವರು ಸ್ವಂತ ಬಲದಿಂದಲೂ ಸಹ ಗೆಲ್ಲಲು ಸಾಧ್ಯವಿಲ್ಲ. ಅಲ್ಲದೆ ಇತರೇ ಸ್ಥಳೀಯ ಪಕ್ಷಗಳನ್ನು ದುರ್ಬಲಗೊಳಿಸಿ, ಪರೋಕ್ಷವಾಗಿ ಬಿಜೆಪಿಯ ಗೆಲುವಿಗೆ ಸಹಾಯ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಮುಸ್ಲಿಮ್‌ ಬಾಹುಳ್ಯ ಇರೋ ಮುಸ್ತಫಾಬಾದ್‌ನಲ್ಲಿ ಬಿಜೆಪಿಗೆ ಭರ್ಜರಿ ಗೆಲುವು

ಬಿಜೆಪಿಯನ್ನು ಗೆಲ್ಲಿಸಿದಂತಹ ರಾಹುಲ್ ಗಾಂಧಿಯವರಿಗೆ ನಾನು ಅಭಿನಂದನೆ ಸಲ್ಲಿಸಲು ಇಚ್ಛಿಸುತ್ತೇನೆ. ಈ ಸಾಧನೆಯ ಬಗ್ಗೆ ಅವರಿಗೆ ಬಹಳ ಹೆಮ್ಮೆ ಇದೆ ಎಂದು ನಾನು ಭಾವಿಸುತ್ತೇನೆ ಎಂದು ವ್ಯಂಗ್ಯವಾಡಿದರು.

 

Share This Article