ದೆಹಲಿ ಅಬಕಾರಿ ನೀತಿ ಹಗರಣ- ಕೆಸಿಆರ್ ಪುತ್ರಿಯ ಮಾಜಿ ಆಡಿಟರ್ ಬಂಧನ

Public TV
1 Min Read

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ (Delhi excise policy case) ಸಂಬಂಧಿಸಿ ಹೈದರಾಬಾದ್ ಮೂಲದ ಚಾರ್ಟರ್ಡ್ ಅಕೌಂಟೆಂಟ್ ಬುಚ್ಚಿ ಬಾಬು ಗೋರಂಟ್ಲಾ ಅವರನ್ನು ಕೇಂದ್ರ ತನಿಖಾ ದಳ (CBI) ಬಂಧಿಸಿದೆ.

ಆರೋಪಿ ಬುಚ್ಚಿ ಬಾಬು ಗೋರಂಟ್ಲಾ, ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ( K Chandrashekar Rao) ಅವರ ಪುತ್ರಿ ಎಂಎಲ್‍ಸಿ ಕವಿತಾ (Kavitha) ಅವರ ಮಾಜಿ ಆಡಿಟರ್ ಆಗಿದ್ದ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬುಚ್ಚಿ ಬಾಬು ಗೋರಂಟ್ಲಾ ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ವರದಿಗಳ ಪ್ರಕಾರ, ಗೋರಂಟ್ಲಾ ಅವರು ದೆಹಲಿಯ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ: ಗ್ರಾಮದೇವತೆಗಾಗಿ ಊರಿಗೆ ಊರೇ ಖಾಲಿ- ಕಲಘಟಗಿಯಲ್ಲಿ ವಿಶಿಷ್ಟ ಜಾತ್ರೆ

ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಡಿ. 12ರಂದು ಕೆಸಿಆರ್ ಪುತ್ರಿ ಕವಿತಾ ಅವರನ್ನು ಹೈದರಾಬಾದ್‍ನಲ್ಲಿ ಸಿಬಿಐ ವಿಚಾರಣೆ ನಡೆಸಿತ್ತು. ಇದನ್ನೂ ಓದಿ: ಜಾತಕ ಹೊಂದಿಸಿ ಹಿಂದೂ ಸಂಪ್ರದಾಯದಂತೆ 2 ಗಿಳಿಗಳಿಗೆ ಅದ್ಧೂರಿ ವಿವಾಹ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *