ನವದೆಹಲಿ: ವಾಯುಮಾಲಿನ್ಯ ನಿಯಂತ್ರಣ ಉದ್ದೇಶದಿಂದ ದೆಹಲಿಯಲ್ಲಿ (Delhi) ಅವಧಿ ಮೀರಿದ ಹಳೆಯ ವಾಹನಗಳಿಗೆ ಇಂಧನ ನಿಷೇಧಿಸುವ ನಿರ್ಧಾರಕ್ಕೆ ವ್ಯಾಪಕ ಟೀಕೆ ವ್ಯಕ್ತವಾದ ಬೆನ್ನಲ್ಲೇ ದೆಹಲಿಯ ಬಿಜೆಪಿ ಸರ್ಕಾರ (BJP Government) ಯೂಟರ್ನ್ ಹೊಡೆದಿದೆ. ಯೋಜನೆಯಲ್ಲಿ ತಾಂತ್ರಿಕ ಸಮಸ್ಯೆ ಕಾರಣ ನೀಡಿ ಹಳೆಯ ವಾಹನಗಳ ಮೇಲಿನ ಇಂಧನ ನಿಷೇಧ ಆದೇಶವನ್ನು ವಾಪಸ್ ಪಡೆದಿದೆ.
ಸರ್ಕಾರ ಜನಾಕ್ರೋಶದ ಬೆನ್ನಲ್ಲೇ ತಾಂತ್ರಿಕ ಸಮಸ್ಯೆ ಕಾರಣ ನೀಡಿ ಹಳೆಯ ವಾಹನಗಳ ಮೇಲಿನ ಇಂಧನ ನಿಷೇಧವನ್ನು ತೆಗೆದುಹಾಕುವಂತೆ ವಾಯು ಗುಣಮಟ್ಟ ನಿರ್ವಹಣಾ ಆಯೋಗಕ್ಕೆ ಪತ್ರ ಬರೆದಿತ್ತು.ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ ತಿಂಗಳಲ್ಲಿ ಭೂಕುಸಿತ ಎಚ್ಚರಿಕೆ ನೀಡಿದ ಭೂವಿಜ್ಞಾನಿಗಳು