ಡಿಕೆಶಿ ಜಾಮೀನು ಅರ್ಜಿ ವಿಚಾರಣೆ ಅಕ್ಟೋಬರ್ 14ಕ್ಕೆ ಮುಂದೂಡಿಕೆ

Public TV
1 Min Read

ನವದೆಹಲಿ: ದೆಹಲಿ ಹೈಕೋರ್ಟ್ ಗೆ ಡಿ.ಕೆ ಶಿವಕುಮಾರ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಅಕ್ಟೋಬರ್ 14ಕ್ಕೆ ಮುಂದೂಡಲಾಗಿದ್ದು, ಇನ್ನೂ 14 ದಿನ ಕನಕಪುರ ಬಂಡೆ ಸೆರೆಮನೆ ವಾಸ ಅನುಭವಿಸಬೇಕಿದೆ.

ಇಡಿ ಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಶುಕ್ರವಾರ ದೆಹಲಿ ಹೈಕೋರ್ಟ್ ಗೆ ಡಿ.ಕೆ.ಶಿವಕುಮಾರ್ ಪರ ವಕೀಲರು ಮೇಲ್ಮನವಿ ಸಲ್ಲಿಸಿದ್ದರು. ಇಡಿ ಕೋರ್ಟ್ ಆದೇಶ ಪ್ರಶ್ನಿಸಿ ಡಿಕೆಶಿ ಸಲ್ಲಿಸಿರುವ ಜಾಮೀನು ಅರ್ಜಿ ಇಂದು ದೆಹಲಿ ಹೈಕೋರ್ಟ್ ನ ನ್ಯಾ.ಸುರೇಶ್ ಕುಮಾರ್ ನೇತೃತ್ವದ ಏಕ ಸದಸ್ಯ ಪೀಠದಲ್ಲಿ ವಿಚಾರಣೆಗೆ ಬಂದಿತ್ತು. ವಿಚಾರಣೆ ನಡೆಯಬೇಕಿತ್ತು. ಈ ವಿಚಾರಣೆಯನ್ನು ನ್ಯಾಯಾಲಯ ಅ. 14ಕ್ಕೆ ಮುಂದೂಡಿದ್ದು, ಸದ್ಯ ಡಿಕೆಶಿ ತಿಹಾರ್ ಜೈಲಿನಲ್ಲೇ ಕಾಲ ಕಳೆಯಬೇಕಿದೆ.

ಅಕ್ರಮ ಹಣ ವರ್ಗಾವಣೆ ಆರೋಪ ಹೊತ್ತು ನ್ಯಾಯಂಗ ಬಂಧನದಡಿ ತಿಹಾರ್ ಜೈಲು ಸೇರಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಇಡಿ ವಿಶೇಷ ನ್ಯಾಯಾಲಯ ಜಾಮೀನು ಅರ್ಜಿ ವಜಾ ಮಾಡಿದೆ. ಕನಕಪುರ ಬಂಡೆ ತಿಹಾರ್ ಜೈಲಿನಲ್ಲೇ ಸೆರೆಮನೆವಾಸ ಅನುಭವಿಸುತ್ತಿದ್ದು, ಇಡಿ ವಿಶೇಷ ನ್ಯಾಯಾಲಯ ಜಾಮೀನು ನಿರಾಕರಿಸಿದಕ್ಕೆ ಡಿಕೆ ಶಿವಕುಮಾರ್ ಸಹೋದರ ಡಿ.ಕೆ ಸುರೇಶ್ ಜಾಮೀನು ಪಡೆಯುವ ಬಗ್ಗೆ ಕಾನೂನು ಹೋರಾಟ ಮುಂದುವರಿಸಿದ್ದಾರೆ.

ಡಿಕೆಶಿ ಪರ ವಕೀಲರು ಯಾವ ಆಧಾರದ ಮೇಲೆ ಜಾಮೀನು ಕೊಡಲು ಇಡಿ ಕೋರ್ಟ್ ನಿರಾಕರಿಸಿದೆಯೋ ಅದೇ ಆಧಾರಗಳ ಮೇಲೆ ವಾದ ಮಾಡಿ ಜಾಮೀನು ದಕ್ಕಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಇಡಿ ಕೋರ್ಟ್ ಜಾಮೀನು ನಿರಾಕರಿಸಲು ಪ್ರಮುಖವಾಗಿ ಮೂರು ಕಾರಣ ಕೊಟ್ಟಿತು. 317 ಖಾತೆಗಳ ಮೂಲಕ ಹಣ ವರ್ಗಾವಣೆ, ಡಿಕೆಶಿ ಪ್ರಭಾವಿಯಾಗಿರೋದು ಮತ್ತು ಪ್ರಕರಣ ತನಿಖಾ ಹಂತದಲ್ಲಿದೆ ಹಾಗಾಗಿ ಜಾಮೀನು ನೀಡೋಕೆ ಸಾಧ್ಯವಿಲ್ಲ ಅನ್ನೋದನ್ನು ಸ್ಪಷ್ಟಪಡಿಸಿದೆ. ಇದೇ ಮೂರು ವಿಚಾರಗಳನ್ನು ಇಟ್ಟು ಹೈಕೋರ್ಟ್ ನಲ್ಲಿ ಡಿಕೆಶಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ತಮಗೆ ಸಂಬಂಧ ಇಲ್ಲದ ವಿಚಾರಗಳ ಬಗ್ಗೆ ಇಡಿ ವ್ಯಾಪ್ತಿ ಮೀರಿ ತನಿಖೆ ಮಾಡುತ್ತಿದೆ ಎಂದು ಡಿಕೆ ಪರ ವಕೀಲರು ವಾದಿಸಲಿದ್ದಾರೆ ಎಂದು ತಿಳಿದು ಬಂದಿದೆ.

Share This Article
Leave a Comment

Leave a Reply

Your email address will not be published. Required fields are marked *