ಕ್ಷುಲ್ಲಕ ವಿಚಾರಕ್ಕೆ ಪತ್ನಿಯ ಹುಟ್ಟುಹಬ್ಬದಂದೇ ಕೊಲೆ ಮಾಡಿದ ಪತಿರಾಯ!

Public TV
1 Min Read

ನವದೆಹಲಿ: ಕ್ಷುಲ್ಲಕ ವಿಚಾರಕ್ಕೆ ಪತಿ ಪತ್ನಿಯನ್ನು ಆಕೆಯ ಹುಟ್ಟುಹಬ್ಬದ ದಿನದಂದೇ ತಮ್ಮ ಮೂರು ವರ್ಷದ ಮಗುವಿನ ಮುಂದೆಯೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ದೆಹಲಿಯ ಖಾನ್‍ಪುರ ಪ್ರದೇಶದಲ್ಲಿ ನಡೆದಿದೆ.

ರೇಣು (30) ಕೊಲೆಯಾದ ಪತ್ನಿ. ಬುಧವಾರ ತಡರಾತ್ರಿ 1.30ರ ವೇಳೆಗೆ ದೆಹಲಿಯ ಖಾನ್‍ಪುರ ಪ್ರದೇಶದಲ್ಲಿ ರೇಣು ಮೇಲೆ ಪತಿ ರಾಜೇಶ್ ಚೌಹಾಣ್  ಚಾಕುವಿನಿಂದ ಬರ್ಬರವಾಗಿ ಹಲ್ಲೆ ನಡೆಸಿದ್ದ, ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ರೇಣುರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ  ಆಸ್ಪತ್ರೆಗೆ ಸಾಗಿಸುವಷ್ಟರಲ್ಲೇ ರೇಣು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಘಟನೆ ಸಂಬಂಧ ಪೊಲೀಸರು ಆರೋಪಿ ಪತಿಯನ್ನು ಬಂಧಿಸಿದ್ದಾರೆ. ದಂಪತಿಗಳು ಕ್ಷುಲ್ಲಕ ವಿಚಾರಕ್ಕೆ ಪ್ರತಿನಿತ್ಯ ಗಲಾಟೆ ನಡೆಸುತ್ತಿದ್ದರು. ಅಲ್ಲದೇ ಆಕೆಯ ಹುಟ್ಟಹಬ್ಬವಾದ ಬುಧವಾರವು ಸಹ ಪತಿ ಕುಡಿದು ಬಂದು ಪತ್ನಿಯೊಂದಿಗೆ ಜಗಳವಾಡಿಕೊಂಡಿದ್ದ. ಈ ವೇಳೆ ಏಕಾಏಕಿ ತಮ್ಮ ಮೂರು ವರ್ಷದ ಮಗುವಿನ ಮುಂದೆಯೇ ಪತ್ನಿಯ ಮೇಲೆ ಚಾಕುವಿನಿಂದ ಬರ್ಬರವಾಗಿ ಹಲ್ಲೆ ನಡೆಸಿದ್ದಾನೆ. ದಂಪತಿಗಳು ನಡುವೆ ಹಣಕಾಸಿನ ವಿಚಾರಕ್ಕೆ ಹಲವು ಬಾರಿ ಜಗಳ ನಡೆಯುತ್ತಿತ್ತು ಎಂದು ಪೊಲೀಸರು ಹೇಳಿದ್ದಾರೆ.

ಸ್ಥಳೀಯ ನಿವಾಸಿಗಳ ನೋಡಿರುವ ಪ್ರಕಾರ, ರೇಣು ಮೇಲೆ ಪತಿ ಚಾಕುವಿನಿಂದ ಹಲ್ಲೆ ನಡೆಸಿದ್ದು, ಈ ವೇಳೆ ರೇಣು ತಪ್ಪಿಸಿಕೊಳ್ಳಲು ಮನೆಯಿಂದ ಹೊರಬಂದಾಗ ಬಿದ್ದಿದ್ದರು ಎಂದು ಹೇಳಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *