ಬಿಎಸ್‍ವೈ ಕೈ ಹಿಡಿದು ಕಟ್ಟಡಕ್ಕೆ ಅಡಿಗಲ್ಲು ಹಾಕಿದ ಸಚಿವ ರೇವಣ್ಣ

Public TV
1 Min Read

ನವದೆಹಲಿ: ರಾಜಕೀಯ ಬದ್ಧ ವೈರಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಕೈ ಹಿಡಿದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಪೂಜೆ ಮಾಡಿದ್ದಾರೆ.

ದೆಹಲಿಯ ಕರ್ನಾಟಕ ಭವನದ ಹೊಸ ಕಟ್ಟಡಕ್ಕೆ ಅಡಿಗಲ್ಲು ಕಾರ್ಯಕ್ರಮ ಇಂದು ಬೆಳಗ್ಗೆ ನಡೆದಿತ್ತು. ಈ ವೇಳೆ ಬಿ.ಎಸ್.ಯಡಿಯೂರಪ್ಪ ಅವರು ಕರ್ನಾಟಕ ಭವನದ ಹೊರ ಭಾಗದಲ್ಲಿ ವಾಕಿಂಗ್ ಮಾಡುತ್ತಿದ್ದರು. ಇದನ್ನು ನೋಡಿದ ಸಚಿವರು, ನೇರವಾಗಿ ಬಿ.ಎಸ್.ಯಡಿಯೂರಪ್ಪ ಅವರ ಬಳಿ ಬಂದು ಕೈ ಹಿಡಿದು ಕರೆತಂದು ಅಡಿಗಲ್ಲು ಹಾಕಿದರು.

ಈ ಕಾರ್ಯಕ್ರಮಕ್ಕೆ ಬಿ.ಎಸ್.ಯಡಿಯೂರಪ್ಪ ಅವರಿಗೆ ಅಧಿಕೃತ ಆಹ್ವಾನವಿರಲಿಲ್ಲ. ಆದರೆ ಕನ್ನಡ ಭವನದ ಮುಂದೆ ವಾಕಿಂಗ್ ಹೊರಟಿದ್ದ ಅವರನ್ನು ಸಚಿವ ರೇವಣ್ಣ ಕರೆತಂದಿದ್ದಾರೆ. ಬಳಿಕ ಒಟ್ಟಾಗಿ ಪೂಜೆ ಮಾಡಿ, ಕರ್ನಾಟಕ ಭವನದ ಹೊಸ ಕಟ್ಟಡಕ್ಕೆ ಅಡಿಗಲ್ಲು ನೆರವೇರಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *