ಮೋದಿ, ಸಿಜೆಐ ಬಳಿ ಮಾತಾಡ್ಬೇಕೆಂದು ಹೈಟೆನ್ಷನ್ ವಿದ್ಯುತ್ ಕಂಬ ಏರಿದ ಭೂಪ!

Public TV
1 Min Read

ನವದೆಹಲಿ: ಪ್ರಧಾನಿ ಮೋದಿ (Narendra Modi), ಸಿಜೆಐ ಬಳಿ ಮಾತಾಡಬೇಕೆಂದು ವ್ಯಕ್ತಿಯೊಬ್ಬ ಹೈಟೆನ್ಷನ್ ವಿದ್ಯುತ್ ಕಂಬವನ್ನು ಏರಿದ ಘಟನೆ ದೆಹಲಿಯ (Delhi) ಯಮುನಾ ಖಾದರ್ ಪ್ರದೇಶದಲ್ಲಿ ನಡೆದಿದೆ.

ಮಾಹಿತಿ ಪಡೆದ ಪೊಲೀಸರು (Police) ಹಾಗೂ ಅಗ್ನಿ ಶಾಮಕ ಸಿಬ್ಬಂದಿ ಆತನನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ವಿಚಾರಿಸಿದಾಗ ಪರಿಸರ ಸಂರಕ್ಷಣೆಗೆ ಸಂಬಂಧಿಸಿದಂತೆ ಮುಖ್ಯ ನ್ಯಾಯಮೂರ್ತಿ, ಮುಖ್ಯಮಂತ್ರಿ ಮತ್ತು ಪ್ರಧಾನ ಮಂತ್ರಿಯೊಂದಿಗೆ ಮಾತನಾಡಬೇಕೆಂದು ಆತ ಹೇಳಿಕೊಂಡಿದ್ದಾನೆ ಎಂದು ದೆಹಲಿ ಅಗ್ನಿಶಾಮಕ ಸೇವೆ ಎಡಿಒ ಯಶವಂತ್ ಸಿಂಗ್ ಮೀನಾ ತಿಳಿಸಿದ್ದಾರೆ.

ಬುಧವಾರ ಬೆಳಿಗ್ಗೆ 10:30 ಕ್ಕೆ, ಹೈಟೆನ್ಷನ್ ತಂತಿಯ ಕಂಬವನ್ನು ಆತ ಹತ್ತಿದ್ದ. ಈ ಬಗ್ಗೆ ಸ್ಥಳೀಯರು ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಳಿಕ ಆತನನ್ನು ರಕ್ಷಣೆ ಮಾಡಲಾಯಿತು. ಆತ ಸರಿಯಾದ ಮಾಹಿತಿಯನ್ನು ನೀಡದ ಕಾರಣ ಎಲ್ಲಿಂದ ಬಂದಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಆ ವ್ಯಕ್ತಿ ಬಂಗಾಳ ಅಥವಾ ಬಿಹಾರದವನಾಗಿರಬಹುದು. ಶಿಕ್ಷಕನಾಗಿ ಕೆಲಸ ಮಾಡುವುದಾಗಿ ಹೇಳಿಕೊಂಡಿದ್ದಾನೆ ಎಂದು ಅವರು ಹೇಳಿದರು. ಈ ಸಂಬಂಧ ವಿಚಾರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Share This Article