ಮೂವರು ಆಪ್‌ ಕೌನ್ಸಿಲರ್‌ಗಳು ಬಿಜೆಪಿ ಸೇರ್ಪಡೆ – ದೆಹಲಿಯಲ್ಲಿ ಟ್ರಿಪಲ್‌ ಎಂಜಿನ್‌ ಸರ್ಕಾರ ಬರುತ್ತಾ?

Public TV
1 Min Read

ನವದೆಹಲಿ: ವಿಧಾನಸಭಾ ಚುನಾವಣೆಯಲ್ಲಿ (Delhi Election) ಸೋತ ಬೆನ್ನಲ್ಲೇ ಆಮ್‌ ಆದ್ಮಿ ಪಕ್ಷದ (Aam Admi Party) ಮೂವರು ಕೌನ್ಸಿಲರ್‌ಗಳು ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಅನಿತಾ ಬಸೋಯಾ, ನಿಖಿಲ್ ಚಪ್ರಾಣ , ಧರಂವೀರ್ ಅವರು ಬಿಜೆಪಿ (BJP) ಸೇರ್ಪಡೆಯಾಗಿದ್ದಾರೆ. ಮೂವರ ಜೊತೆ ಮಾಜಿ ಆಪ್‌ ಜಿಲ್ಲಾ ಅಧ್ಯಕ್ಷ ಸಂದೀಪ್‌ ಸೇರ್ಪಡೆಯಾಗಿದ್ದಾರೆ.

ಈ ಮೂವರು ಅಲ್ಲದೇ ಇನ್ನು ಕೆಲವು ಕೌನ್ಸಿಲರ್‌ಗಳು ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಹೀಗಾಗಿ ಮುಂದಿನ ದೆಹಲಿ ಮಹಾನಗರ ಪಾಲಿಕೆ ಚುನಾವಣೆ ಮೇಯರ್‌ ಚುನಾವಣೆಯನ್ನು ಬಿಜೆಪಿ ಗೆಲ್ಲುವ ಸಾಧ್ಯತೆ ಇದೆ. 14 ರ ಪೈಕಿ 10 ಶಾಸಕರು ಮತದಾನ ಹಕ್ಕನ್ನು ಹೊಂದಿರುವ ಕಾರಣ ಮೇಯರ್‌ ಚುನಾವಣೆಯನ್ನು ಬಿಜೆಪಿ ಗೆಲ್ಲಬಹದು ಎನ್ನಲಾಗುತ್ತಿದೆ. ಇದನ್ನೂ ಓದಿ: ಶೀಷ್ ಮಹಲ್ ವಿವಾದ; ನವೀಕರಣ, ಐಷಾರಾಮಿ ವೆಚ್ಚದ ವಿವರವಾದ ತನಿಖೆಗೆ ಆದೇಶಿಸಿದ ಕೇಂದ್ರ ಜಾಗೃತ ಆಯೋಗ

ದೆಹಲಿಯಲ್ಲಿ ಬರುತ್ತಾ ಟ್ರಿಪಲ್‌ ಎಂಜಿನ್‌ ಸರ್ಕಾರ?
ಮಾರ್ಚ್‌ನಲ್ಲಿ ದೆಹಲಿಯಲ್ಲಿ ಮೇಯರ್‌ ಚುನಾವಣೆ ನಡೆಯಲಿದೆ. ಈ ಚುನಾವಣೆ ಗೆದ್ದರೆ ರಾಜಧಾನಿಯಲ್ಲಿ ಟ್ರಿಪಲ್‌ ಎಂಜಿನ್‌ ಸರ್ಕಾರ ಅಧಿಕಾರಕ್ಕೆ ಬಂದಂತೆ ಆಗುತ್ತದೆ.

ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ, ದೆಹಲಿ ವಿಧಾನಸಭೆಯಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಮೇಯರ್‌ ಚುನಾವಣೆ ಗೆದ್ದರೆ ಮಹಾನಗರ ಪಾಲಿಕೆಯಲ್ಲೂ ಬಿಜೆಪಿ ಅಧಿಕಾರಕ್ಕೆ ಬರಲಿದೆ.

 

Share This Article