NOC ನೀಡಲು 10 ಲಕ್ಷಕ್ಕೆ ಬೇಡಿಕೆ – ಬೆಂಗಳೂರಲ್ಲಿ ‘ಲೋಕಾ’ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು

Public TV
1 Min Read

ಬೆಂಗಳೂರು: NOC ನೀಡಲು 10 ಲಕ್ಷ ರೂ.ಗೆ ಬೇಡಿಕೆಯಿಟ್ಟಿದ್ದ ಇಬ್ಬರು ಭ್ರಷ್ಟ ಎಂಜಿನಿಯರ್‌ಗಳನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.

ಬಂಧಿತರನ್ನು ಹೆಬ್ಬಾಳ ಸಬ್ ಡಿವಿಷನ್‌ನ AEE ಮಹದೇವ್ ಹಾಗೂ ಆರ್‌ಎಮ್‌ವಿ ಬಿಬಿಎಂಪಿಯ AE ಆಗಿರುವ ಸುರೇಂದ್ರ ಎಂದು ಗುರುತಿಸಲಾಗಿದೆ.ಇದನ್ನೂ ಓದಿ:ಯಡಿಯೂರಪ್ಪ, ವಿಜಯೇಂದ್ರ, ಕುಮಾರಸ್ವಾಮಿ ಪ್ರಾಮಾಣಿಕರಾ: ಸಿದ್ದರಾಮಯ್ಯ ಪ್ರಶ್ನೆ

ಇಬ್ಬರು ಎಂಜಿನಿಯರ್‌ಗಳು ಎನ್‌ಒಸಿ ನೀಡಲು 10 ಲಕ್ಷ ರೂ.ಗೆ ಬೇಟಿಕೆಯಿಟ್ಟಿದ್ದರು. ಈ ಕುರಿತು ಸಂಜಯ್ ಎಂಬವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬಲೆ ಬೀಸಿದ್ದ ಲೋಕಾಯುಕ್ತ ಅಧಿಕಾರಿಗಳು ಎಇ ಸುರೇಂದ್ರನನ್ನು 5 ಲಕ್ಷ ರೂ. ಪಡೆಯುವುದಾಗ ಬಂಧಿಸಿದ್ದಾರೆ.

ಸದ್ಯ ಇಬ್ಬರು ಬಂಧಿಸಿದ್ದು, ಲಂಚದ ಹಣವನ್ನು ಅಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ.ಇದನ್ನೂ ಓದಿ: ಐಎಎಸ್ ಹುದ್ದೆಗೆ ನಕಲಿ ಪ್ರಮಾಣಪತ್ರ: ಪೂಜಾ ಖೇಡ್ಕರ್‌ಗೆ ನಿರೀಕ್ಷಣಾ ಜಾಮೀನು

Share This Article