ಬೆಂಗಳೂರು: ದೀಪಾವಳಿ (Deepavali) ಹಬ್ಬದ ಹಿನ್ನೆಲೆ, ಮೆಜೆಸ್ಟಿಕ್ ಕೆಂಪೇಗೌಡ ಬಸ್ ನಿಲ್ದಾಣ (Mesjestic Bus Stand) ಖಾಲಿ ಖಾಲಿಯಾಗಿದೆ.
ಶುಕ್ರವಾರ, ಶನಿವಾರ, ಭಾನುವಾರ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬೇರೆ ಜಿಲ್ಲೆ, ರಾಜ್ಯಗಳಲ್ಲಿರುವ ಊರಿಗೆ ತೆರಳಿದ್ದರು. ಕಳೆದ 4 ದಿನಗಳಿಂದ ಬೆಂಗಳೂರಿನಿಂದ ತೆರಳುವ ಬಹುತೇಕ ಬಸ್ಸುಗಳು ಭರ್ತಿಯಾಗಿದ್ದವು. ಇಂದು ಬಸ್ಸುಗಳಲ್ಲಿ ಸಂಚರಿಸುತ್ತಿರುವ ಪ್ರಯಾಣಿಕರ ಸಂಖ್ಯೆ ಇಳಿಕೆಯಾಗಿದೆ. ಇದನ್ನೂ ಓದಿ: ಬಿ ಖಾತಾದಿಂದ ಎ ಖಾತಾ ಪರಿವರ್ತನೆಗೆ ಅರ್ಜಿ ಆಹ್ವಾನ – ಬೆಂಗಳೂರಿನಲ್ಲಿ 500ಕ್ಕೂ ಹೆಚ್ಚು ಮಂದಿಯಿಂದ ಅರ್ಜಿ
ಈ ಶನಿವಾರ ಸಂಜೆ ಮತ್ತು ಭಾನುವಾರ ಊರಿಗೆ ತೆರಳಿರುವ ಪ್ರಯಾಣಿಕರು ಮರಳಿ ಬರಲಿರುವುದರಿಂದ ಬೆಂಗಳೂರು ಪ್ರವೇಶಿಸುವ ಮಾರ್ಗಗಳಾದ ಗೊರಗುಂಟೆಪಾಳ್ಯ ಸಿಗ್ನಲ್, ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ಹಲವು ಕಡೆ ಭಾರೀ ಟ್ರಾಫಿಕ್ ಜಾಮ್ ಆಗುವ ಸಾಧ್ಯತೆಗಳಿವೆ.