ಹರ್ಯಾಣ ಸಿಎಂ ತೆಗಳಿ, ಪಂಜಾಬ್ ಸಿಎಂ ಕ್ರಮವನ್ನು ಹೊಗಳಿದ ವೀರಪ್ಪ ಮೊಯ್ಲಿ

Public TV
1 Min Read

ಚಿಕ್ಕಬಳ್ಳಾಪುರ: ಹರ್ಯಾಣದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರ ವಿರುದ್ಧ ವಾಗ್ದಾಳಿ ನಡೆಸಿ, ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರನ್ನು ಸಂಸದ ವೀರಪ್ಪ ಮೊಯ್ಲಿ ಹೊಗಳಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹಿಂಸಾಚಾರವನ್ನು ನಿಭಾಯಿಸಲು ಆಗದ ಮನೋಹರ್ ಲಾಲ್ ಖಟ್ಟರ್ ಹರ್ಯಾಣದ ಮುಖ್ಯಮಂತ್ರಿಯಾಗಿ ಮುಂದುವರಿಯಲು ಅಯೋಗ್ಯ ಎಂದು ಸಂಸದ ವೀರಪ್ಪ ಮೊಯ್ಲಿ ಟೀಕಿಸಿದ್ದಾರೆ.

ಗುಪ್ತಚರ ಮಾಹಿತಿ ಇದ್ದರೂ ಅಲ್ಲಿ ಸೂಕ್ತ ಮಂಜಾಗ್ರತಾ ಕ್ರಮವನ್ನು ತೆಗೆದುಕೊಂಡಿಲ್ಲ. ಹಿಂಸಾಚಾರ ನಡೆಸುವ ಬಗ್ಗೆ ಮೊದಲೇ ಮಾಹಿತಿ ಇದ್ದರೂ ಕ್ರಮಗಳನ್ನು ಕೈಗೊಳ್ಳದ ಕಾರಣ ಮುಖ್ಯಮಂತ್ರಿ ಆಗಿರಲು ಖಟ್ಟರ್ ಆಯೋಗ್ಯ ಎಂದು ವಾಗ್ದಾಳಿ ನಡೆಸಿದರು.

ಪಂಜಾಬ್ ನಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಸರ್ಕಾರ ಮುನ್ನೆಚ್ಚರಿಕಾ ಕ್ರಮವನ್ನು ಕೈಗೊಂಡಿತ್ತು ಎಂದು ಹೇಳುವ ಮೂಲಕ ಅಮರಿದಂದರ್ ಸಿಂಗ್ ಅವರನ್ನು ವೀರಪ್ಪ ಮೊಯ್ಲಿ ಸಮರ್ಥಿಸಿಕೊಂಡರು.

 

Share This Article
Leave a Comment

Leave a Reply

Your email address will not be published. Required fields are marked *