ಹಳೇ ವೈಷಮ್ಯಕ್ಕೆ 9 ಎಕರೆ ಹತ್ತಿ ಬೆಳೆ ನಾಶ – ಲಕ್ಷಾಂತರ ರೂ. ಬೆಳೆ ಕಳೆದುಕೊಂಡ ರೈತರು

Public TV
1 Min Read

ರಾಯಚೂರು: ಜಮೀನು ವಿವಾದ (Land Dispute) ಹಿನ್ನೆಲೆ ಹಳೇ ವೈಷಮ್ಯಕ್ಕೆ ದೂರದ ಸಂಬಂಧಿಕರೇ 9 ಎಕರೆಯಲ್ಲಿ ಬೆಳೆದಿದ್ದ ಹತ್ತಿ ಬೆಳೆಯನ್ನು (Cotton Crop) ಟ್ರ‍್ಯಾಕ್ಟರ್‌ನಿಂದ (Tractor) ನಾಶ ಮಾಡಿರುವ ಘಟನೆ ರಾಯಚೂರಿನ (Raichur) ಮಾನ್ವಿ (Manvi) ತಾಲೂಕಿನ ಕುರಡಿ ಗ್ರಾಮದಲ್ಲಿ ನಡೆದಿದೆ.

ನಾಲ್ಕು ತಿಂಗಳ ಬೆಳೆಯನ್ನು ಎಲ್ಲರೆದುರೆ ಸಂಪೂರ್ಣವಾಗಿ ನಾಶಮಾಡಲಾಗಿದೆ. ನರಸಿಂಹ ಹಾಗೂ ಹುಲಿಗೆಪ್ಪ ಕುಟುಂಬ ಉಳುಮೆ ಮಾಡುತ್ತಿದ್ದರು. ಜಮೀನಿನಲ್ಲಿದ್ದ ಹತ್ತಿ ಬೆಳೆಯನ್ನು ಅಬ್ರಾಹಂಪ್ಪ, ಮಾರೆಪ್ಪ, ಪ್ರಭಾಕರ್ ಸೇರಿ ಹಲವರು ನಾಶ ಮಾಡಿದ್ದಾರೆ ಅಂತ ರೈತರು (Farmers) ಆರೋಪಿಸಿದ್ದಾರೆ. ಮಳೆ ಕೊರತೆಯ ನಡುವೆಯೂ ಉತ್ತಮ ಫಸಲು ಬಂದಿತ್ತು. ಹತ್ತಿ ಗಿಡಗಳು ಕಾಯಿಕಟ್ಟಿದ್ದವು. ಆದರೆ ಹತ್ತಿ ಬೆಳೆ ಕೈಗೆ ಸಿಗುವ ಮೊದಲೇ ಸಂಪೂರ್ಣ ನಾಶಮಾಡಿದ್ದಾರೆ. ಇದನ್ನೂ ಓದಿ: ದೇವನಹಳ್ಳಿಯಲ್ಲಿ ಮರ್ಯಾದಾ ಹತ್ಯೆ – ಅನ್ಯಜಾತಿ ಯುವಕನನ್ನ ಪ್ರೀತಿಸುತ್ತಿದ್ದಳೆಂದು ತಂದೆಯಿಂದಲೇ ಮಗಳ ಕೊಲೆ

ಘಟನೆ ಹಿನ್ನೆಲೆ 28 ಜನರ ವಿರುದ್ಧ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಕರೆಗೆ 25 ರಿಂದ 30 ಸಾವಿರ ರೂ. ಖರ್ಚು ಮಾಡಲಾಗಿತ್ತು. ಕೆಲವೇ ದಿನಗಳಲ್ಲಿ ಲಕ್ಷಾಂತರ ರೂ. ಬೆಳೆ ಕೈಗೆ ಸೇರುವುದಿತ್ತು. ಬೆಳೆ ನಷ್ಟವಾಗಿರುವುದರಿಂದ ನಮಗೆ ನ್ಯಾಯ ಸಿಗಬೇಕು ಅಂತ ಉಳುಮೆ ಮಾಡಿದ್ದ ರೈತರು ಆಗ್ರಹಿಸಿದ್ದಾರೆ. ಇದನ್ನೂ ಓದಿ: Breaking: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ 15 ಕಡೆ IT ದಾಳಿ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್