ಕಾಶ್ಮೀರದಿಂದ ಕರ್ನಾಟಕಕ್ಕೆ ಬರುತ್ತಿದ್ದ ಸೇನೆಯ ವಿಶೇಷ ರೈಲನ್ನು ಸ್ಫೋಟಿಸಲು ಯತ್ನ

By
1 Min Read

ಭೋಪಾಲ್: ಮಧ್ಯಪ್ರದೇಶದ (Madhya Pradesh) ಬುರ್ಹಾನ್‍ಪುರ ಜಿಲ್ಲೆಯಲ್ಲಿ ಸೇನಾ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ವಿಶೇಷ ರೈಲನ್ನು ಸ್ಫೋಟಿಸಲು ಯತ್ನಿಸಿರುವ ಘಟನೆ ನಡೆದಿದೆ. ಸೇನೆಯ (Indian Army) ವಿಶೇಷ ರೈಲು ಜಮ್ಮು-ಕಾಶ್ಮೀರದಿಂದ ಕರ್ನಾಟಕಕ್ಕೆ ತೆರಳುತ್ತಿದ್ದಾಗ ಸಗ್ಫಾಟ ರೈಲು ನಿಲ್ದಾಣದ ಬಳಿ ಸ್ಫೋಟಕ್ಕೆ ಯತ್ನ ನಡೆದಿದೆ.

ಮಧ್ಯಪ್ರದೇಶದ ರೈಲ್ವೆ ಹಳಿಯಲ್ಲಿ ಕನಿಷ್ಠ 10 ಡಿಟೋನೇಟರ್‌ಗಳು ಹಾಗೂ ಗ್ಯಾಸ್ ಸಿಲಿಂಡರ್ ಪತ್ತೆಯಾಗಿವೆ ಎಂದು ಅಧಿಕಾರಿಗಳು ಇಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೆಲಸದ ಒತ್ತಡದಿಂದ 26ರ ಉದ್ಯೋಗಿ ಸಾವು ಪ್ರಕರಣ; ಕಾರ್ಮಿಕ ಸಚಿವಾಲದಿಂದ ವರದಿ ಕೇಳಿದ ಮಾನವ ಹಕ್ಕುಗಳ ಆಯೋಗ

ರೈಲು ಡಿಟೋನೇಟರ್‍ಗಳ ಮೇಲೆ ಹಾದು ಹೋಗುತ್ತಿದ್ದಂತೆ ಸ್ಫೋಟದಿಂದ ಲೋಕೋ ಪೈಲಟ್ ರೈಲನ್ನು ತಕ್ಷಣವೇ ನಿಲ್ಲಿಸಿದ್ದಾರೆ. ನಂತರ ಠಾಣಾಧಿಕಾರಿಗೆ ಮಾಹಿತಿ ನೀಡಿದರು. ಘಟನೆಯಲ್ಲಿ ಯಾರಿಗೂ ಹಾನಿಯಾಗಿಲ್ಲ.

ಭಯೋತ್ಪಾದನಾ ನಿಗ್ರಹ ದಳ (ATS), ರಾಷ್ಟ್ರೀಯ ತನಿಖಾ ಸಂಸ್ಥೆ (NIA), ರೈಲ್ವೆ ಮತ್ತು ಸ್ಥಳೀಯ ಪೊಲೀಸರು ಘಟನೆಯ ಕುರಿತು ತನಿಖೆ ನಡೆಸುತ್ತಿದ್ದಾರೆ.

ಇನ್ನೂ, ಉತ್ತರ ಪ್ರದೇಶದ ಕಾನ್ಪುರದ ಪ್ರೇಂಪುರ್ ರೈಲು ನಿಲ್ದಾಣದ ಬಳಿ ಹಳಿಗಳ ಮೇಲೆ ಭಾನುವಾರ ಖಾಲಿ ಗ್ಯಾಸ್ ಸಿಲಿಂಡರ್‌ಗಳು ಪತ್ತೆಯಾಗಿವೆ. ಗೂಡ್ಸ್ ರೈಲು ಲೋಕೋ ಪೈಲಟ್ ರೈಲು ನಿಲ್ಲಿಸಲು ತುರ್ತು ಬ್ರೇಕ್ ಹಾಕಿ ನಿಲ್ಲಿಸಿದ್ದಾರೆ.

ರೈಲು ಕಾನ್ಪುರದಿಂದ ಪ್ರಯಾಗ್‍ರಾಜ್‍ಗೆ ತೆರಳುತ್ತಿದ್ದಾಗ ಬೆಳಗ್ಗೆ 8:10ಕ್ಕೆ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ತಿಂಗಳಲ್ಲಿ ಉತ್ತರ ಪ್ರದೇಶದಲ್ಲಿ ನಡೆದ ಎರಡನೇ ಪ್ರಕರಣ ಇದಾಗಿದೆ. ಸೆಪ್ಟೆಂಬರ್ 8 ರಂದು, ಪ್ರಯಾಗರಾಜ್‍ನಿಂದ ಭಿವಾನಿ ಕಡೆಗೆ ಹೋಗುತ್ತಿದ್ದ ಕಾಳಿಂದಿ ಎಕ್ಸ್‍ಪ್ರೆಸ್‍ನ್ನು ಹಳಿಗಳ ಮೇಲೆ ಎಲ್‍ಪಿಜಿ ಸಿಲಿಂಡರ್ ಇರಿಸುವ ಮೂಲಕ ಹಳಿತಪ್ಪಿಸಲು ಪ್ರಯತ್ನಿಸಲಾಗಿತ್ತು. ಇದನ್ನೂ ಓದಿ: ಈ ಬಾರಿ ದಸರಾದಲ್ಲಿ ಗಂಗಾರತಿಯಂತೆ ಕಾವೇರಿ ಆರತಿ ಮಾಡಬೇಕೆಂಬ ಆಸೆ: ಚಲುವರಾಯಸ್ವಾಮಿ

Share This Article