ಅಪ್ಪು ಸಮಾಧಿಗೆ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿದ ನಟ ವಿಜಯ್ ದೇವರಕೊಂಡ

Public TV
1 Min Read

ತೆಲುಗಿನ ಖ್ಯಾತ ನಟ ವಿಜಯ್ ದೇವರಕೊಂಡ ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಲೈಗರ್ ಸಿನಿಮಾದ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಳ್ಳಲು ಉದ್ಯಾನ ನಗರಕ್ಕೆ ಆಗಮಿಸಿರುವ ಅವರು, ಮೊದಲಿಗೆ ಅಪ್ಪು ಸಮಾಧಿಗೆ ತೆರಳಿ ಪುಷ್ಪ ನಮನ ಸಲ್ಲಿಸಿದರು. ಏರ್ ಪೋರ್ಟ್ ನಿಂದ ನೇರವಾಗಿಯೇ ಕಂಠೀರವ ಸ್ಟುಡಿಯೋಗೆ ಆಗಮಿಸಿದ ವಿಜಯ್ ದೇವರಕೊಂಡ, ಭಾವುಕರಾಗಿಯೇ ಅಪ್ಪು ಸಮಾಧಿಗೆ ನಮನ ಸಲ್ಲಿಸಿದರು.

ಆಗಸ್ಟ್ 25 ರಂದು ದೇಶಾದ್ಯಂತ ರಿಲೀಸ್ ಆಗುತ್ತಿರುವ ಲೈಗರ್ ಸಿನಿಮಾದ ಪತ್ರಿಕಾಗೋಷ್ಠಿ ಮತ್ತು ಪ್ರಿ ರಿಲೀಸ್ ಇವೆಂಟ್ ಇಂದು ಬೆಂಗಳೂರಿನಲ್ಲಿ ನಡೆಯುತ್ತಿದ್ದು, ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ವಿಜಯ್ ದೇವರಕೊಂಡ, ಅನನ್ಯಾ ಪಾಂಡೆ, ನಟ ವಿಶ್, ನಿರ್ದೇಶಕ ಜಗನ್ನಾಥ್ ಪೂರಿ ಸೇರಿದಂತೆ ಹಲವರು ಬೆಂಗಳೂರಿಗೆ ಆಗಮಿಸಿದ್ದಾರೆ. ಅದಕ್ಕೂ ಮುನ್ನ ಎಲ್ಲರೂ ಅಪ್ಪು ಸಮಾಧಿಗೆ ಬಂದು ನಮನ ಸಲ್ಲಿಸಿದ್ದಾರೆ. ಇದನ್ನೂ ಓದಿ: ಕೊನೆಗೂ ಶಿವಣ್ಣ, ಅನುಶ್ರೀ ಭೇಟಿಯಾಗಿ ಆಸೆ ಈಡೇರಿಸಿಕೊಂಡ ಕಾಫಿನಾಡು ಚಂದು

ವಿಜಯ್ ದೇವರಕೊಂಡ ಮತ್ತು ಅನನ್ಯಾ ಪಾಂಡೆ ಕಾಂಬಿನೇಷನ್ ನ ಮೊದಲ ಸಿನಿಮಾ ಇದಾಗಿದ್ದು, ಕನ್ನಡವೂ ಸೇರಿದಂತೆ ಹಲವು ಭಾಷೆಗಳಲ್ಲಿ ರಿಲೀಸ್ ಆಗುತ್ತಿದೆ. ಈಗಾಗಲೇ ದೇಶದ ನಾನಾ ಭಾಗಗಳಲ್ಲಿ ಸಿನಿಮಾದ ಪ್ರಮೋಷನ್ ಶುರು ಮಾಡಿದೆ ಚಿತ್ರತಂಡ. ಈ ಸಿನಿಮಾದಲ್ಲಿ ವಿಜಯ್ ದೇವರಕೊಂಡ ಖಡಕ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದು, ಬಾಕ್ಸರ್ ಪಾತ್ರವನ್ನು ನಿರ್ವಹಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *