ಬೆಂಗಳೂರು: ನಗರದ ಟಿ.ದಾಸರಹಳ್ಳಿ ಕ್ಷೇತ್ರದಲ್ಲಿ (Dasarahalli Constituency) ಜೆಡಿಎಸ್ (JDS) ಶಾಸಕ ಮಂಜುನಾಥ್ ಅಭಿವೃದ್ಧಿ ಶೂನ್ಯ ಎಂದು ಬಿಜೆಪಿ ಮಾಜಿ ಶಾಸಕ ಎಸ್.ಮುನಿರಾಜು (S Muniraju) ದಾಖಲೆಗಳ ಸಮೇತ ಆರೋಪ ಮಾಡಿದ್ದಾರೆ.
ಟಿ.ದಾಸರಹಳ್ಳಿಯ ಪಕ್ಷದ ಕಚೇರಿಯಲ್ಲಿಂದು ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎಲ್ಲಾ ಕಾಮಗಾರಿಗಳಲ್ಲೂ ಕೋಟಿ ಕೋಟಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ದಾಖಲೆಗಳನ್ನೂ ಬಿಡುಗಡೆ ಮಾಡಿದ್ದಾರೆ. ಇದನ್ನೂ ಓದಿ: ಕರ್ನಾಟಕ ಸುರಕ್ಷಿತವಾಗಿಡಲು ಮೋದಿ, ಬಿಜೆಪಿ ಸರ್ಕಾರದಿಂದ ಮಾತ್ರ ಸಾಧ್ಯ – ಅಮಿತ್ ಶಾ
ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಸಿಎಂ ಆಗಿದ್ದಾಗಲೂ ಟಿ.ದಾಸರಹಳ್ಳಿ ಕ್ಷೇತ್ರಕ್ಕೆ ಏನೂ ಕೊಡುಗೆ ನೀಡಿಲ್ಲ. ಈಗ ಬಿಜೆಪಿ ಸರ್ಕಾರ ಅನುದಾನವನ್ನ ವಾಪಸ್ ಪಡೆದಿದೆ ಅಂತಾ ತಮ್ಮ ಶಾಸಕರಿಂದ ಸುಳ್ಳು ಹೇಳಿಸುತ್ತಿದ್ದಾರೆ. ಬಿಜೆಪಿ ಸರ್ಕಾರ ಕಳೆದ 4 ವರ್ಷಗಳಲ್ಲಿ ಕ್ಷೇತ್ರಕ್ಕೆ 900 ಕೋಟಿ ನೀಡಿದೆ. ಆದರೂ ಬಿಜೆಪಿ (BJP) ಸರ್ಕಾರದ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಿ.ದಾಸರಹಳ್ಳಿ ಕ್ಷೇತ್ರದ ಅಭಿವೃದ್ಧಿಗೆ ನಮ್ಮ ಸರ್ಕಾರ ಶ್ರಮಿಸಿದೆ. ಆದ್ರೆ ಶಾಸಕ ಮಂಜುನಾಥ್ ಕ್ಷೇತ್ರದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ ಎಂದ ಅವರು, ಎಲ್ಲಾ ದಾಖಲೆ ಬಿಡುಗಡೆ ಮಾಡಿ ಬಹಿರಂಗ ಚರ್ಚೆಗೆ ಆಹ್ವಾನಿಸಿದರು. ಇದನ್ನೂ ಓದಿ: ಟರ್ಕಿ ಭೀಕರ ಭೂಕಂಪದಲ್ಲಿ ಸಿಲುಕಿದ್ದ ಬೆಂಗಳೂರು ಮೂಲದ ಕಂಪನಿಯ ಟೆಕ್ಕಿ ಸಾವು – ಅವಶೇಷಗಳಡಿ ಮೃತದೇಹ ಪತ್ತೆ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k