ಟಿಬೇಟಿಯನ್ ಧರ್ಮಗುರು ದಲೈಲಾಮಾಗೆ ಹುಬ್ಬಳ್ಳಿಯಲ್ಲಿ ಅದ್ದೂರಿ ಸ್ವಾಗತ

Public TV
1 Min Read

ಹುಬ್ಬಳ್ಳಿ: ಗೋವಾದಿಂದ ಖಾಸಗಿ ವಿಮಾನದ ಮೂಲಕ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಟಿಬೇಟಿಯನ್ ಧರ್ಮಗುರು ದಲೈಲಾಮಾ ಅವರಿಗೆ ಧಾರವಾಡ ಜಿಲ್ಲಾಡಳಿತದಿಂದ ಸ್ವಾಗತ ಕೋರಿ, ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಕ್ಕೆ ಬೀಳ್ಕೊಡಲಾಯಿತು.

ಇಂದಿನಿಂದ ಡಿ. 24ರವರೆಗೆ ಮಂಡಗೋಡದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ದಲೈಲಾಮಾ ಅವರು ತಮ್ಮ 12 ಜನ ಧಾರ್ಮಿಕ ಅನುಚರರೊಂದಿಗೆ ಭಾಗವಹಿಸಲಿದ್ದಾರೆ. ಆದ್ದರಿಂದ ಇಂದು ಗೋವಾದಿಂದ ಖಾಸಗಿ ವಿಮಾನದ ಮೂಲಕ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಅವರು ಆಗಮಿಸಿದ್ದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದೀಪಾ ಚೋಳನ್, ಹುಬ್ಬಳ್ಳಿ – ಧಾರವಾಡ ಪೊಲೀಸ್ ಆಯುಕ್ತ ಆರ್.ದಿಲೀಪ್, ಉಪವಿಭಾಗಾಧಿಕಾರಿ ಮಹಮದ್ ಜುಬೇರ್, ಡಿಸಿಪಿ ನಾಗೇಶ್.ಡಿ.ಎಲ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದು, ಧರ್ಮಗುರುಗಳಿಗೆ ಹೂಗುಚ್ಚ ನೀಡಿ ಸ್ವಾಗತಿಸಿದರು.

Share This Article
Leave a Comment

Leave a Reply

Your email address will not be published. Required fields are marked *